ಪುಸ್ತಕ ಸಂಪದ

  • "ಒಂದು ಬದಿ ಸಹ್ಯಾದ್ರಿ, ಒಂದು ಬದಿ ಕಡಲು

    ನಡು ಮಧ್ಯದಲಿ ಅಡಕೆ ತೆಂಗುಗಳ ಮಡಲು

    ಸಿರಿಗನ್ನಡದ ಚಪ್ಪರವೆ ನನ್ನ ಜಿಲ್ಲೆ

    ಇಲ್ಲಿಯೇ ಇನ್ನೊಮ್ಮೆ ಹುಟ್ಟುವೆನು ನಲ್ಲೆ "

    ದಿನಕರ ದೇಸಾಯಿಯವರ ಈ ಚುಟುಕದಿಂದಲೇ ವಿವೇಕ ತಮ್ಮ ಕಾದಂಬರಿಗೆ ಒಂದು ಬದಿ ಕಡಲು ಎನ್ನುವ ಹೆಸರನ್ನು ಆಯ್ದಿದ್ದಾರೆ. ಒಂದು ಊರು ನಮಗೆ ನಮ್ಮ ಬಾಲ್ಯದಲ್ಲಿ ಕಂಡಂತೆಯೇ ನಮ್ಮ ತಾರುಣ್ಯದಲ್ಲಿ, ಯೌವನದಲ್ಲಿ, ನಡುವಯಸ್ಸಿನಲ್ಲಿ ಮತ್ತು ಮುದಿತನದಲ್ಲಿ ಕಾಣುವುದಿಲ್ಲ. ಊರು ಕಾಲಮಾನಕ್ಕೆ ತಕ್ಕಂತೆ ಬದಲಾಗುವುದು ಸಹಜ ವಿದ್ಯಮಾನವೇ. ಆದರೆ ಅದು ಬದಲಾಗುವ ಪ್ರಕ್ರಿಯೆ ತುಂಬ ಕುತೂಹಲಕರ. ಪೇಟೆ ಆಧುನಿಕ ಸ್ವರೂಪ ಪಡೆದುಕೊಳ್ಳುವುದು, ಕಟ್ಟಡಗಳೇಳುವುದು ಇತ್ಯಾದಿ ಕಣ್ಣಿಗೆ ಹೊಡೆದು ಕಾಣಿಸುತ್ತದೆ, ಅದರಲ್ಲೇನೂ ವಿಶೇಷವಿಲ್ಲ. ಆದರೆ ಊರು…

  • ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ, ವಿವರಗಳು ಕಟ್ಟಿಕೊಡುವ ಒಂದು ವಾತಾವರಣ, ಇವುಗಳಿಂದ ಅಲ್ಲಿನ ಬದುಕು ಜೀವಂತಗೊಳ್ಳುವ ಪರಿ ನಿಜಕ್ಕೂ ತುಂಬ ಸಹಜವಾಗಿ, ಲಾಲಿತ್ಯಪೂರ್ಣವಾಗಿ ಬಂದಿದೆ.

  • ( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ. ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು ಮೌಲ್ಯಮಾಪನ. ಇದನ್ನು ಅನುವಾದ ಮಾಡಿದವರು ರಾಜಕಾರಣಿ ಕೆ. ಎಚ್. ಶ್ರೀನಿವಾಸರು . ಸುಮಾರು ಮೂರ್ನಾಲ್ಕು ವರ್ಷ ತಮ್ಮ ರಾಜಕಾರಣದ ನಡುವೆ ಶ್ರಮಿಸಿದ್ದಾರೆ . ಪುಸ್ತಕವನ್ನು ಮೂಲದಲ್ಲಿ ಅರ್ಥ ಮಾಡಿಕೊಳ್ಳುವದೇ ಕಷ್ಟ ; ಪುಸ್ತಕ ಅಂತಹದು ; ಅಂಥದ್ದನ್ನು…

  • Unaccustomed Earth ಹೆಸರಿನ ನೀಳ್ಗಥೆಗಳ ಸಂಕಲನ ಹೊರಬಿದ್ದಿದೆ. ಮನುಷ್ಯ ಸಂಬಂಧಗಳು, ಅವನ ಭಾವನೆಗಳು ಕ್ರಮೇಣ ಅರ್ಥಕಳೆದುಕೊಳ್ಳುವುದನ್ನು, ಸಡಿಲಗೊಳ್ಳುವುದನ್ನು ಮೌನವಾದ ತಲ್ಲಣಗಳಲ್ಲಿ ಗುರುತಿಸುತ್ತಲೇ ಅವುಗಳಿಂದ ಆತ ಬಿಡುಗಡೆ ಪಡೆಯುವ ಹಂತದಲ್ಲಿ ಅಥವಾ ಬಿಡುಗಡೆ ಪಡೆದ ನಂತರ ಉಳಿಯುವ ಶಿಲ್ಕು ಏನಿದೆ ಅದರಲ್ಲಿ ಆ ಸಂಬಂಧಗಳ, ಭಾವನೆಗಳ ಪ್ರಾಮಾಣಿಕತೆಯನ್ನು ಅರಸುವ ಕತೆಗಳು, ಬೇರೆ ಹೊಸ ಸಂಬಂಧದ ಹುರುಪಿನ ಆಳದಲ್ಲಿ ಹಳೆಯ ಸಂಬಂಧದ ನೆರಳುಗಳನ್ನು ಕಾಣುವ ಕಥೆಗಳು, ನಡುವಯಸ್ಸಿನಲ್ಲಿ ಸಂಬಂಧಗಳು ಪಡೆದುಕೊಂಡ ಅನಿವಾರ್ಯ ಆಕಾರ ವಿಕಾರಗಳನ್ನು ಮೌನವಾಗಿ ಚಿತ್ರಿಸುತ್ತ ಅವರ ಅಥವಾ ಎಳೆಯರ ಹೊಸ ಸಂಬಂಧಗಳನ್ನು ನಿರೂಪಿಸುವ ಕಥೆಗಳು ಇಲ್ಲಿವೆ. ಹೆಚ್ಚಾಗಿ ಇಲ್ಲಿ ಗಂಡು ಹೆಣ್ಣು ಸಂಬಂಧಗಳೇ ಪ್ರಾಮುಖ್ಯ ಪಡೆದಂತಿದೆಯಾದರೂ ತಂದೆ ಮಗಳು, ತಾಯಿ…

  • ಕೃತಿ: ‘ತಲೆಮಾರು’ 

    ಬಂಜಗೆರೆಯವರು ಅನುವಾದಿಸಿದ ಅಕ್ಸರ್ ಹೇಲಿಯ ವಿಶ್ವವಿಖ್ಯಾತ ಕಾದಂಬರಿ ರೂಟ್ಸ್. ತಲೆಮಾರು ಎನ್ನುವ ಹೆಸರಿನಲ್ಲಿ ಈ ಸಂಗ್ರಹಾನುವಾದ ಪ್ರಕಟವಾದದ್ದು 2003ರಲ್ಲಿ. ರೂಟ್ಸ್ ಹೇಲಿಯ ಕುಟುಂಬ ಚರಿತ್ರೆಯ ದಾಖಲೆ. 1976ರಲ್ಲಿ ಪ್ರಕಟವಾದದ್ದು. ಇದು ಮುವ್ವತ್ತೇಳು ಭಾಷೆಗಳಿಗೆ ಅನುವಾದಗೊಂಡಿದೆಯಂತೆ. ಇದಕ್ಕೆ ಮಿಲಿಯಗಟ್ಟಲೆ ಪ್ರತಿಗಳ ಮಾರಾಟದ ದಾಖಲೆಯಿದೆ. ಕಿರು ಧಾರಾವಾಹಿಯಾಗಿ ಟಿವಿಯಲ್ಲಿ ಪ್ರಸಾರವಾದಾಗ ಸುಮಾರು ನೂರ ಮೂವತ್ತು ಮಿಲಿಯನ್ ಜನ ವೀಕ್ಷಿಸಿದರೆಂದು ಅಂದಾಜು.

    ಯಾವಾಗಲೂ ಚರಿತ್ರೆಯನ್ನು ಬರೆಯುವವರು ಗೆದ್ದ ಜನ. ಸೋತವರಿಗೆ ಚರಿತ್ರೆಯಿಲ್ಲ ಎನ್ನುತ್ತಾರೆ ಜಿ.ರಾಜಶೇಖರ. ಮೇಲೆ ಹೇಳಿದ ಪುಸ್ತಕಗಳು ಸೋತವರ ಚರಿತ್ರೆ.

    ಬಂಜಗೆರೆಯವರು ಈಚೆಗೆ ಕೆನ್ಯಾದ ಕೆಲವು ಕತೆಗಳನ್ನು ಕೂಡ ಕನ್ನಡಕ್ಕೆ…

  • ನಮ್ಮ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರೆಂದು ಈಗಾಗಲೇ ಗುರುತಿಸಿಕೊಂಡಿರುವ ಗೋಪಾಲಕೃಷ್ಣ ಪೈಯವರು ನಿಜಕ್ಕೂ ಕೆಲವು ಒಳ್ಳೊಳ್ಳೆಯ ಚೀನೀ ಕಥೆಗಳನ್ನು ಆಯ್ದು ಅನುವಾದಿಸಿಕೊಟ್ಟಿದ್ದಾರೆ. ಈ ಸಂಕಲನದಲ್ಲಿರುವ ಒಟ್ಟು ಹದಿನಾರು ಕಥೆಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದ ಎಲ್ಲಾ ಕಥೆಗಳೂ ತಮ್ಮದೇ ಆದ ಒಂದು ಗುಂಗು ಆವರಿಸುವಂತೆ ಮಾಡುವಲ್ಲಿ, ನಮ್ಮ ಒಳಗನ್ನು ತಟ್ಟುವಲ್ಲಿ, ಮತ್ತೆ ನೆನೆದಾಗ ವಾಹ್ ಅನಿಸುವಂತೆ ಮಾಡುವಲ್ಲಿ ಸಫಲವಾಗಿವೆ. ಈ ಎಲ್ಲ ಅಂಶಗಳಿಗಾಗಿ ನಾವು ಮೊದಲು ಅಭಿನಂದಿಸಬೇಕಾದ್ದು ಪೈಯವರನ್ನೆ. ಅವರ ಅನುವಾದ ಅಷ್ಟು ಸೊಗಸಾಗಿದೆ. ಅನುವಾದ ಅನಿಸದ ಹಾಗಿದೆ. ಈ ಸಂಕಲನದ ಪಾತ್ರಗಳು ಬಹುಕಾಲ ಮನಸ್ಸಿನಲ್ಲಿ ಉಳಿದು ನಮ್ಮ ನಿಮ್ಮ ನಡುವಿನ ವ್ಯಕ್ತಿಗಳಾಗಿ ಬಿಡುವುದು ಈ ಸಂಕಲನದ ಬಹುಮುಖ್ಯ ಸಾಧನೆ.

    ಪುಟಗಳು 248+xiv

  • ಇದೊಂದು ಪುಟ್ಟ ಪುಸ್ತಕ. ಐವತ್ತು ಅರವತ್ತು ಪುಟಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದವೆಲ್ಲ ಪುಟ್ಟ ಪುಟ್ಟ ಕಥೆಗಳೇ. ಈ ಪುಸ್ತಕ ಕೂಡ ಸಾಹಿತ್ಯದ ವಲಯದಲ್ಲಿ ಪ್ರಚಲಿತವಿರುವ ಸದ್ದುಗದ್ದಲ ಎಬ್ಬಿಸಿದಂತಿಲ್ಲ. ಅದೇ ರೀತಿ ತಣ್ಣಗೇ ಮನಸ್ಸನ್ನು ಆವರಿಸುವ ಇಲ್ಲಿನ ಏಳು ಕಥೆಗಳು ನಮ್ಮನ್ನು ನಿಜಕ್ಕೂ ಚಕಿತಗೊಳಿಸುತ್ತವೆ. ಇಲ್ಲಿನ ಕತೆಗಳ ಹಂದರ, ಆಪ್ತ ನಿರೂಪಣೆ, ಜಾಣತನವನ್ನು ಮರೆಮಾಚದ ತಾಂತ್ರಿಕ ಕಲೆಗಾರಿಕೆ, ಸಹಜವಾಗಿ ಒಂದು ವಾತಾವರಣವನ್ನು ತನ್ನ ಕತೆಯ ಸುತ್ತ ನಿರ್ಮಿಸಿಕೊಳ್ಳುವ ಸರಳ ಶೈಲಿ, ಎಲ್ಲವನ್ನೂ ಮೀರಿಸುವ ಮಾನವೀಯ ಕಳಕಳಿಯ ತುಡಿತ ಯಾರನ್ನೂ ಸೆಳೆಯುವಂತಿವೆ. ಈ ಪುಸ್ತಕದ ಹೆಸರೇ ಮುದ್ದಾಗಿದೆ, ಬಾಳೆಗಿಡ ಗೊನೆಹಾಕಿತು! ಕತೆಗಾರ ಬಿ.ಎಂ.ಬಶೀರ್.

  • ಜರ್ಮನ್ ಕಾದಂಬರಿಕಾರ ಹರ್ಮನ್ ಹೆಸ್ ಬರೆದ ನಾರ್ಸಿಸಸ್ ಮತ್ತು ಗೋಲ್ಡಮಂಡ್ (ಇಂಗ್ಲೀಷಿಗೆ ಉರ್ಸುಲ್ ಮೊಲಿನಾರೊ, ಕನ್ನಡಕ್ಕೆ ಡಿ. ಆರ್. ಮಿರ್ಜಿ) ಒಂದು ಉತ್ತಮ ಪುಸ್ತಕ. ಕಾದಂಬರಿಯ ನಡುನಡುವೆ ನಡುನಡುವೆ ನಮ್ಮ ಕಂಬಾರರ (ಚಕೋರಿ, ಶಿಖರಸೂರ್ಯ) ಮಾತೃಪರಂಪರೆ, ಪಿತೃಪರಂಪರೆಯ ನೆನಪಾದರೆ ಅಚ್ಚರಿಯಿಲ್ಲ!

    ಅನುವಾದ ಸಿಬಿಲ್ ಕಾದಂಬರಿಯಷ್ಟು ಕಲಾತ್ಮಕವಾಗಿದೆ ಅನಿಸುವುದಿಲ್ಲ ನಿಜ. ಆದರೆ ಡಿ.ಆರ್.ಮಿರ್ಜಿಯವರು ಕೃತಿಯ ಸೊಗಡನ್ನು ಉಳಿಸಿಕೊಡಲು ವಹಿಸಿದ ಶ್ರಮ ಎದ್ದು ಕಾಣುತ್ತದೆ. 1946ರ ನೊಬೆಲ್ ಪಾರಿತೋಷಕ ವಿಜೇತ ಕೃತಿಯನ್ನು ಐಬಿಎಚ್ ನವರು ಪ್ರಕಟಿಸಿದ್ದಾರೆ. ಇನ್ನೂರ ತೊಂಭತ್ತನಾಲ್ಕು ಪುಟಗಳ ಈ ಕಾದಂಬರಿಯ ಬೆಲೆ ನೂರ ಎಂಭತ್ತು ರೂಪಾಯಿಗಳು.

    ಅನೇಕ ಒಳನೋಟಗಳಿಂದ ಬದುಕನ್ನು ಕೆಣಕುವ ಈ ಕೃತಿ ಓದಿ ಮುಗಿದ ಮೇಲೂ ಕಾಡಬಲ್ಲಷ್ಟು…

  • ಸಿ.ಎನ್ ರಾಮಚಂದ್ರರ ಮೊತ್ತ ಮತ್ತು ಇತರ ಕಥೆಗಳು ಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ತೀರ ಆಪ್ತವಾದ ಧಾಟಿಯಲ್ಲಿ, ಸ್ವಗತದ ವಿನಯವಂತಿಕೆಯನ್ನು ಪಡೆದಿರುವ ಈ ಕಥೆಗಳು ಅದೇ ಕಾರಣಕ್ಕೆ ಓದಿಗೆ ಒಂದು ಬಗೆಯ ಆಹ್ವಾನವನ್ನು ನೀಡುವಂತಿವೆ.

    ಕೃತಿ: ಮೊತ್ತ ಮತ್ತು ಇತರ ಕಥೆಗಳು(ಕಥಾ ಸಂಕಲನ)

    ಪುಟ ಸಂಖ್ಯೆ: 120 

    (ಶ್ರೀ ಮಹಾಬಲಮೂರ್ತಿ ಕೂಡ್ಲೆಕೆರೆಯವರ "ಒಂದಲ್ಲಾ ಒಂದೂರಿನಲ್ಲಿ" ಹೆಸರಿನ ಕಥೆಗಳಿಗಾಗಿಯೇ ಇರುವ ಹೊಸ ಪತ್ರಿಕೆಯಲ್ಲಿ ಪ್ರಕಟಿತ ಲೇಖನದ ಆಯ್ದ ಭಾಗ.)

  • ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ.

    ಅಗಸನಕಟ್ಟೆಯವರ ಕಥೆಗಳ ಓದು ಒಂದು ಚೇತೋಹಾರಿ ಅನುಭವವನ್ನು ನೀಡುವ ಕಸು ಹೊಂದಿವೆ. ಇನ್ನಷ್ಟು ಮತ್ತಷ್ಟು ಇಂಥ ಕಥೆಗಳನ್ನು ಓದುವ ಆಸೆಯನ್ನು ಇವು ಹುಟ್ಟಿಸುತ್ತವೆ. ಇಲ್ಲಿನ ಪ್ರತಿಯೊಂದು ಕಥೆಯೂ ನಮಗೆ ಯಾವುದೋ ಹೊಸ ಒಳನೋಟ, ಜೀವನ ದರ್ಶನ, ಬದುಕಿಗೆ ಒಂದು ಕಾಣ್ಕೆ ನೀಡುತ್ತವೆ ಎನ್ನಲಾಗದು. ಆದರೆ ಈ ಓದು ಕೊಡುವ ಖುಶಿ ಕೇವಲ ಮನರಂಜನೆಯದ್ದಲ್ಲ. ಅದು ನಿರ್ಮಿಸುವ ಒಂದು ವಾತಾವರಣ, ಅವು ತೆರೆದು ತೋರಿಸುವ ಒಂದು ಸಹಜ ಬದುಕು, ಥಟ್ಟನೇ ಅಪ್ತವಾಗುವ ಅವರ ನಿರೂಪಣಾ ವಿಧಾನ, ನಡುನಡುವೆ ಬರುವ ಅನನ್ಯವಾದ ಕೆಲವು ಅಪರೂಪದ…