ಪುಸ್ತಕ ಸಂಪದ

  • ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ.

    ಅಗಸನಕಟ್ಟೆಯವರ ಕಥೆಗಳ ಓದು ಒಂದು ಚೇತೋಹಾರಿ ಅನುಭವವನ್ನು ನೀಡುವ ಕಸು ಹೊಂದಿವೆ. ಇನ್ನಷ್ಟು ಮತ್ತಷ್ಟು ಇಂಥ ಕಥೆಗಳನ್ನು ಓದುವ ಆಸೆಯನ್ನು ಇವು ಹುಟ್ಟಿಸುತ್ತವೆ. ಇಲ್ಲಿನ ಪ್ರತಿಯೊಂದು ಕಥೆಯೂ ನಮಗೆ ಯಾವುದೋ ಹೊಸ ಒಳನೋಟ, ಜೀವನ ದರ್ಶನ, ಬದುಕಿಗೆ ಒಂದು ಕಾಣ್ಕೆ ನೀಡುತ್ತವೆ ಎನ್ನಲಾಗದು. ಆದರೆ ಈ ಓದು ಕೊಡುವ ಖುಶಿ ಕೇವಲ ಮನರಂಜನೆಯದ್ದಲ್ಲ. ಅದು ನಿರ್ಮಿಸುವ ಒಂದು ವಾತಾವರಣ, ಅವು ತೆರೆದು ತೋರಿಸುವ ಒಂದು ಸಹಜ ಬದುಕು, ಥಟ್ಟನೇ ಅಪ್ತವಾಗುವ ಅವರ ನಿರೂಪಣಾ ವಿಧಾನ, ನಡುನಡುವೆ ಬರುವ ಅನನ್ಯವಾದ ಕೆಲವು ಅಪರೂಪದ…

  • ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು ಕೈಹಿಡಿದೆತ್ತುತ್ತ ಕಥೆಗಾರನನ್ನು ಬೆಳೆಸುವ ಬಗೆಯೇ ವಿಲಕ್ಷಣವಾದದ್ದು. ಬರಹಗಾರನ ಸೂಕ್ಷ್ಮಪ್ರಜ್ಞ್ಮೆ ಅದನ್ನು ಗಮನಿಸುವ ಬಗೆ, ಅದಕ್ಕೆ ಸ್ಪಂದಿಸುವ ಬಗೆ ಮತ್ತು ಅದೆಲ್ಲ ತನ್ನ ಮೇಲೆ ಉಂಟು ಮಾಡುತ್ತಿರುವುದನ್ನು ಅರ್ಥೈಸಿಕೊಳ್ಳುತ್ತ, ಮುಂದೆ ತಾನು ಅವನ್ನು…

  • ಸುನೀತಾಗೆ ಮಲ್ಲಿಗೆ ಎಂದರೆ ಇಷ್ಟ (ಕಥಾ ಸಂಕಲನ)

    ಸುಂದರ ಪ್ರಕಾಶನ `ಚಿತ್ರಶ್ರೀ', 43, ಕಲಾಮಂದಿರ, 5ನೆಯ ಅಡ್ಡರಸ್ತೆ ಅ.ನ.ಸುಬ್ಬರಾವ್ ರಸ್ತೆ, ಹನುಮಂತನಗರ, ಬೆಂಗಳೂರು - 560 019

    ಪುಟಗಳು:105+6

    ಇದು ಭಾಸ್ಕರ ಹೆಗಡೆಯವರ ಮೊದಲ ಕಥಾಸಂಕಲನ. ಇಲ್ಲಿನ ಹತ್ತೂ ಕಥೆಗಳಲ್ಲಿನ ಸಮಾನ ಅಂಶ ಯಾವುದು ಎಂದು ಯೋಚಿಸಿದರೆ ಮನುಷ್ಯನ ಆಳದಲ್ಲಿ ಹುದುಗಿರುವ ತಣ್ಣನೆಯ ಕ್ರೌರ್ಯ, ಎಲ್ಲೋ ಧಿಗ್ಗನೆ ಎದ್ದು ಬರುವ ಮಾನವೀಯ ಪ್ರೀತಿಯ ಸೆಲೆ, ಮನುಷ್ಯ ಸಂಬಂಧಗಳು ಕೂಡುವ, ಕಾಡುವ ಅನನ್ಯ ಪರಿ, ಆಧುನಿಕತೆ ನುಂಗುತ್ತಿರುವ ಅವನ ಸ್ಮೃತಿಗಳು, ಭ್ರಷ್ಟನಾಗುತ್ತಿರುವ ಅವನ ಹಪಹಪಿ ಎಲ್ಲವೂ ಕಣ್ಣೆದುರು ಬರುತ್ತದೆ. ಹೀಗೆ ಬದುಕನ್ನು ಅದರ ವಿಶಿಷ್ಟತೆಯಲ್ಲಿ ಮತ್ತು ಸಮಗ್ರತೆಯಲ್ಲಿ ಒಟ್ಟಿಗೇ ಹಿಡಿಯಲು ಭಾಸ್ಕರ ಹೆಗಡೆಯವರು…

  • ಹೋದವಾರ ಜಾನ್ ಸ್ಟೈನ್ಬೆಕ್ ಬರೆದ ’ದಿ ಪರ್ಲ’ ಓದಿದೆ. ಸುಮಾರು ೧೧೦ ಪುಟಗಳ ಚಿಕ್ಕ ಪುಸ್ತಕ. ೧೯೪೫ರಲ್ಲಿ ಬರೆದದ್ದು. ಲೈಬ್ರರಿಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳ ಮಾರಾಟದಲ್ಲಿ ೨೫ ಸೆಂಟಿಗೆ ಕೊಂಡ ಪುಸ್ತಕ. ಸರಳ ಕಥೆ, ಅದ್ಭುತ ಎನಿಸುವಂತಹ ನಿರೂಪಣೆ. ದಿನನಿತ್ಯ ತನ್ನ ಸೊಂಟಕ್ಕೊಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ಸಮುದ್ರದ ತಳಕ್ಕೆ ಇಳಿದು ಅಲ್ಲಿನ ಚಿಪ್ಪುಗಳಲ್ಲಿ ಮುತ್ತು ಹುಡುಕುವ ಕಾಯಕದ ಕೀನೊ ಕಥಾನಾಯಕ. ಯುವಾನ ಅವನ ಹೆಂಡತಿ ಹಾಗೂ ಅವರಿಗೊಬ್ಬ ಮಗ ಕೊಯೊಟಿಟೊ. ಒಂದಾನೊಂದು ದಿನ ಕೊಯೊಟಿಟೊನಿಗೆ ಚೇಳು ಕುಟುಕುತ್ತದೆ. ಕುಟುಕಿದ ಕ್ಷಣವೇ ಯುವಾನ ಚೇಳು ಕುಟುಕಿದ ಸ್ಥಳದಿಂದ ವಿಷವನ್ನು ಹೀರಿ ತೆಗೆಯುವ ಪ್ರಯತ್ನ ಮಾಡುತ್ತಾಳೆ. ಕೊನೆಗೆ ವೈದ್ಯನ ಹತ್ತಿರ ಹೋಗುವದೇ ಒಳ್ಳೆಯದು ಎಂದುಕೊಂಡು ಆ ಊರ ವೈದ್ಯನ ಮನೆಗೆ ಹೋಗುತ್ತಾರೆ. ಇವರ…

  • ಡಾ.ಕೆ.ವಿ. ನಾರಾಯಣವರು ಆಧುನಿಕ ಕನ್ನಡ ಜಗತ್ತು ಕಂಡ ವಿಶಿಷ್ಟ ಮತ್ತು ಸೂಕ್ಷ್ಮ ಚಿಂತಕ ಹಾಗೂ ಭಾಷಾಶಾಸ್ತ್ರಜ್ಞ. ಇವರು ಇತ್ತೀಚಿಗೆ ಬರೆದ "ಕನ್ನಡ ಜಗತ್ತು: ಅರ್ಧ ಶತಮಾನ" ಕೃತಿ ಓದಿದ ಮೇಲೆ ನನ್ನಲ್ಲಿ ಹುಟ್ಟಿದ ಚರ್ಚೆ, ವಾಗ್ವಾದ ಮತ್ತು ಸಮರ್ಥನೆಗಳನ್ನು ಕ್ರೋಡಿಕರಿಸಿಕೊಂಡು ಈ ಪುಸ್ತಕವನ್ನು ಕುರಿತು ಕೆಲವು ವಿಷಯಗಳನ್ನು ಚರ್ಚಿಸಲು ಪ್ರಯತ್ನಿಸುವೆ. ಕನ್ನಡ ಭಾಷೆಯನ್ನು ಕುರಿತು ಹಲವಾರು ವಾಗ್ವಾದಗಳು ನಿರಂತರವಾಗಿ ನಡೆದಿವೆ. ಈ ಸಧ್ಯದ ಪರಿಸ್ಥಿತಿಯಲ್ಲಿ ಕನ್ನಡದ ಪ್ರಾಚೀನತೆ, ಪರಂಪರೆಯನ್ನು ಕೆಲವು ಛಿದ್ರ ಛಿದ್ರ ದಾಖಲೆಗಳ ಮುಖಾಂತರ ಕನ್ನಡ ಪ್ರಜ್ಞೆಯನ್ನು ಕಟ್ಟುವ ಭಾವನಾತ್ಮಕ ಪ್ರಯತ್ನಗಳು ನಡೆದಿವೆ. ಈ ಪ್ರಯತ್ನಗಳು ಹುಟ್ಟಾಕುವ ಚರ್ಚೆಗಳು ಎಷ್ಟರಮಟ್ಟಿಗೆ ಕನ್ನಡದ ನಿಜದ ನೆಲೆಗಳನ್ನು ಸಮರ್ಥಿಸುತ್ತವೆ ಎನ್ನುವುದು…

  • ಚಂದ್ರಕಾಂತ ಕುಸನೂರರ ಹೊಸ ಕಾದಂಬರಿ `ಒಂದು ಕೈಫಿಯತ್' ಈ ದಿಸೆಯಲ್ಲಿ ಒಂದು ಹೊಸತನದ, ವಿಶಿಷ್ಟ ಪ್ರಯೋಗ. ಕುಸನೂರರ ಮೂಲಭೂತ ಕಾಳಜಿ ಮನುಷ್ಯನನ್ನು ಎಲ್ಲದರಿಂದ ಲಿಬರೇಟ್ ಮಾಡಿಯೂ ಅವನ ಜೀವನಾಸಕ್ತಿಯನ್ನು ಸಾಯಿಸದೇ, ಸಂನ್ಯಾಸಿಯಾಗಿಸದೇ ಬದುಕಿನೊಳಗೇ ಇರಿಸಿ ಈ ಶೋಧವನ್ನು ನಡೆಸಬೇಕೆನ್ನುವುದು. ಒಂದು ಅರ್ಥದಲ್ಲಿ ಇಲ್ಲಿರುವುದು ಒಂದು ಸಂಘರ್ಷ. ಕಾದಂಬರಿ ಮಾತು, ವಿವರ, ನೋಟಗಳಿಗಿಂತ ಮೌನ, ಅಮೂರ್ತ ಮತ್ತು ಅನೂಹ್ಯಗಳನ್ನೆ ಹೆಚ್ಚು ನೆಚ್ಚಿಕೊಂಡಿರುವಂತಿದೆ. ನಿಜಕ್ಕೂ ಇದೊಂದು ವಿಶಿಷ್ಟ ಪ್ರಯೋಗ, ಹೊಸತನದಿಂದ ಕೂಡಿದ ಕಾದಂಬರಿ.

    ಕಾದಂಬರಿಯ ಹೆಸರು : ಒಂದು ಕೈಫಿಯತ್

  • ಬಾಳಾಸಾಹೇಬ ಲೋಕಾಪುರ ಅವರ ಕಾದಂಬರಿ ಉಧೋ ಉಧೋ ಕುರಿತು ಹೇಳುವುದಾದರೆ ಉಧೋ ಉಧೋ ಎಂಬ ಹೆಸರೇ ಸೂಚಿಸುವಂತೆ ಇದು ಒಂದು ಊರಿಗೆ ಊರೇ ಒಂದಾಗಿ ಎಬ್ಬಿಸುವ ಅತ್ಯುತ್ಸಾಹದ ಜಯಕಾರ, ಅಥವಾ ಅರ್ಥಹೀನ ಸಮೂಹ ಸನ್ನಿಯ ಒಂದು ಗೊಂದಲದ ಗುಲ್ಲು, ಅಥವಾ ಎಲ್ಲ ಬಗೆಯ ಅತಿಯನ್ನು ಕೊಂಕುವ ಒಂದು ವ್ಯಂಗ್ಯದ ಸೊಲ್ಲು ಇತ್ಯಾದಿಗಳಲ್ಲಿ ಯಾವುದೂ ಆಗಬಹುದಾದ್ದು. ಬಾಳಾಸಾಹೇಬ ಲೋಕಾಪುರ ಸೃಷ್ಟಿಸುವ ನಂದೋವಾಡಿಯ ಮಟ್ಟಿಗೆ ಈ ಉಧೋ ಉಧೋ ಎಂಬ ಜೈಕಾರ ಇದೆಲ್ಲವನ್ನೂ ಸೂಚಿಸುತ್ತದೆ ಎನ್ನಬೇಕು. ಅದನ್ನು ಅದರ ವಿಭಿನ್ನ ಪಾತಳಿಗಳಲ್ಲೇ ಅರ್ಥೈಸಿಕೊಳ್ಳಲು ಮಾತ್ರ ಈ ಕಾದಂಬರಿಯ ಪ್ರತಿಯೊಂದು ಪಾತ್ರದ ಪ್ರಜ್ಞೆ ಹರಿಯುವ ಬಗೆಯನ್ನು ಮತ್ತು ಆ ಪ್ರಜ್ಞೆ ಒಟ್ಟಾರೆಯಾಗಿ ಊರಿನ ಸಮಷ್ಟಿಪ್ರಜ್ಞೆಯೊಂದಿಗೆ ಚಲಿಸುವ ಬಗೆಯನ್ನು ಒಟ್ಟಾಗಿಯೇ ಗ್ರಹಿಸಬೇಕಾಗುತ್ತದೆ. ಅಷ್ಟರಮಟ್ಟಿಗೆ…

  • ಜಾಣ ಜಾಣೆಯರ "ಲಂಕೇಶ್ ಪತ್ರಿಕೆ"ಯಲ್ಲಿ ಲಂಕೇಶರು ನೀಲು ಅನ್ನೋ ಹೆಸರಿನಡಿ ಪದ್ಯಗಳನ್ನು ಬರೀತಿದ್ದರು. ನಾನಂತೂ ಅವುಗಳನ್ನಷ್ಟೇ ಓದಿ ಪತ್ರಿಕೆ ಮುಚ್ಚಿಡುತ್ತಿದ್ದ ದಿನಗಳಿದ್ದವು! ಇತ್ತೀಚೆಗೆ ನೀಲುಗಳು ಎಂಬ ಕೇಶವ ಕುಲ್ಕರ್ಣಿಯವರ ಬ್ಲಾಗಿನಲ್ಲಿ "ಹೈಕುಗಳ ಮಾದರಿಯಲ್ಲೇ ಕೆಲವೇ ಕೆಲವು ಸಾಲುಗಳಲ್ಲಿ ಕಾವ್ಯ ಬರೆದದ್ದು ಲಂಕೇಶ್, ನೀಲು ಹೆಸರಿನಲ್ಲಿ. ಕನ್ನಡದಲ್ಲಿ ಅಂಥ ಕಾವ್ಯ ಪ್ರಕಾರಕ್ಕೆ 'ನೀಲುಗಳು' ಎಂದು ನಾಮಕರಣ ಮಾಡಬಹುದೇ?" ಎಂದು ತಮ್ಮ ಒಂದೆರಡು ಕನ್ನಡದ ಹಾಯಿಕುಗಳನ್ನು "ನೀಲುಗಳು" ಎಂದು ಕರೆದಿದ್ದರು. ನೋಡಿ ತುಂಬಾ ಸಂತೋಷವಾಯಿತು. ಹೌದು, "ನೀಲುಗಳು" ಒಂದು ಕಾವ್ಯ ಪ್ರಕಾರವಾಗಬೇಕು ಅಂತ ಅನಿಸಿತು. ಅದಕ್ಕೆ ನೀಲು ಪದ್ಯಗಳ ಜಾಡಿನಲ್ಲೇ ಬರೆಯಬೇಕು ಅಂತ ಅನಿಸಿತು. ಇದು ನನ್ನ ಮೇಲಿನ ಲಂಕೇಶರ ಪ್ರಭಾವ ಅಂತಲೇ ಇಟ್ಕೊಳ್ಳಿ…

  • "ನನ್ನಯ ಬಾಳಿನಲ್ಲಿ ಜೀವಿಸುವುದು ನಾನಲ್ಲ, ಯೇಸುವೆ ನನ್ನಲಿ ಜೀವಿಸುತ್ತಾರಲ್ಲ" ಎಂದೊಬ್ಬ ಕವಿಹೃದಯಿ ಹಾಡಿದ್ದಾನೆ. ಇಂಥದೇ ಧ್ವನಿಯ ಒಂದು ಕವಿಹೃದಯ ಇಪ್ಪತ್ತನೇ ಶತಮಾನದ ಪ್ರಾರಂಭಕಾಲದಲ್ಲಿ ಯೇಸುಕ್ರಿಸ್ತನು ನೆಲೆಸಿದ ದೇಶಕ್ಕೆ ಸಮೀಪದ ಲೆಬನಾನ್ ಎಂಬ ನಾಡಲ್ಲಿ ನೆಲೆಸಿತ್ತು. ಕಹ್ಲಿಲ್ ಗಿಬ್ರಾನ್ ಎಂಬ ಆ ಕವಿಚೇತನ ಯೇಸುವಿನ ನಡೆನುಡಿಯನ್ನು ಆತನ ಸಮಕಾಲೀನರಿಂದ ಸುಶ್ರಾವ್ಯವಾದ ಮಂಜುಳ ನಿನಾದದಂತೆ ಹೇಳಿಸಿದ್ದಾನೆ. ಒಂದು ರೀತಿಯಲ್ಲಿ ಯೇಸುವನ್ನು ನೋಡದೆ, ಯೇಸುವನ್ನು ಸ್ಪರ್ಶಿಸದೆ ಕೇವಲ ಅವನ ಬಟ್ಟೆಯಂಚನ್ನು ಮುಟ್ಟಿ ಪರಮಪಾವನನಾದಂತೆ ಆ ಎಪ್ಪತ್ತು ವ್ಯಕ್ತಿಗಳ ಮುಖಾಂತರ ಯೇಸುವಿನ ವ್ಯಕ್ತಿತ್ವವನ್ನು ಸ್ವತಃ ಅನುಭವಿಸುತ್ತಾನೆ, ಯೇಸುವನ್ನೇ ತನ್ನಲ್ಲಿ ಧರಿಸುತ್ತಾನೆ. ಆ ಎಪ್ಪತ್ತು ವ್ಯಕ್ತಿಗಳು ಜುದಾಸನಾಗಿ, ಪಿಲಾತನಾಗಿ,…

  • ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸುಮ್ಮನಿರುವ ನಮ್ಮ ಮಂತ್ರಿ-ಮಹೋದಯರು, ಇವೇ ಮೊದಲಾದ ಹತ್ತಾರು ವಿಚಾರಗಳು ನಮ್ಮನ್ನು ಆಗಾಗ ಕಾಡುತ್ತಿರುತ್ತವೆ ಅಲ್ಲವೇ? ಆಶ್ಚರ್ಯವೆಂದರೆ ಇದೇ ರೀತಿಯ ಸಮಸ್ಯೆಗಳೇ ಸುಮಾರು ಅರವತ್ತು ವರ್ಷಗಳ ಹಿಂದೆಯೂ (ಅಂದರೆ ಏಕೀಕರಣಕ್ಕೂ ಹತ್ತು ವರ್ಷ ಮೊದಲು) ನಮ್ಮನ್ನು ಕಾಡುತ್ತಿದ್ದವು, ಇವೇನೂ ಹೊಸ ಸಮಸ್ಯೆಗಳಲ್ಲ ಎನ್ನುವ ಮಾತನ್ನು ನಿಮ್ಮ ಮುಂದಿಟ್ಟರೆ ನಂಬುತ್ತೀರಾ? ಪ್ರಾಯಶಃ ನಂಬಲಿಕ್ಕಿಲ್ಲ. ನೀವಷ್ಟೇ ಯಾಕೆ, ವಾರದ ಹಿಂದೆ ಯಾರಾದರೂ ಈ ರೀತಿ ನನಗೆ ಹೇಳಿದ್ದರೆ, ನಾನೂ ಸಹ ಅವರ ಮಾತನ್ನು…