ಚೈತ್ರಾ ಕುಂದಾಪುರ ಮೂಲತಃ ಕುಂದಾಪುರದವರಾಗಿದ್ದು ರಾಷ್ಟ್ರೀಯತೆ ಹಿಂದೂಪರ ಚಿಂತನೆಯಲ್ಲಿ ಮಂಚೂಣಿಯಲ್ಲಿರುವವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರುವ ಇವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಹಲವಾರು ಸಾಮಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಪತ್ರಿಕೆಯಲ್ಲಿ, ಸುದ್ದಿ ವಾಹಿನಿಗಳಲ್ಲಿ, ಕಾಲೇಜು ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಅತ್ಯಂತ ಚಿಕ್ಕ ಪ್ರಾಯದಲ್ಲಿ ಯುವ ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚೈತ್ರಾ ಕುಂದಾಪುರ ಇವರು ಲವ್ ಜಿಹಾದ್ ಕುರಿತು ಬರೆದ ಪುಸ್ತಕವೇ ಪ್ರೇಮಪಾಶ. ಪ್ರೀತಿಯೆಂಬ ಜಿಹಾದಿನ ಪರದೆಯ ಮೂಲಕ ಹಿಂದೂ ಧರ್ಮದ ಹುಡುಗಿಯರನ್ನು ಅನ್ಯ ಧರ್ಮಕ್ಕೆ ಮತಾಂತರ ಮಾಡುವ ರೀತಿಯನ್ನು ಸವಿವರವಾಗಿ ಈ ಪುಸ್ತಕದಲ್ಲಿ…