ನವಕರ್ನಾಟಕ ಪ್ರಕಾಶನದವರು ಡಾ. ಸಿ.ಆರ್. ಚಂದ್ರಶೇಖರ್ ಇವರ ಸಂಪಾದಕತ್ವದಲ್ಲಿ ವ್ಯಕ್ತಿ ವಿಕಸನ ಮಾಲೆ ಈ ಮಾಲಿಕೆಯಲ್ಲಿ ಹೊರತಂದ ಪುಸ್ತಕವೇ ‘ಮನಸ್ಸಿನ ಮ್ಯಾಜಿಕ್'. ವೃತ್ತಿಯಲ್ಲಿ ಬ್ಯಾಂಕ್ ಅಧಿಕಾರಿಯಾಗಿದ್ದ ಅಡ್ಡೂರು ಕೃಷ್ಣ ರಾವ್ ಇವರ ಪ್ರವೃತ್ತಿ ಬರವಣಿಗೆ. ಮಂಗಳೂರಿನ ಬಳಕೆದಾರರ ವೇದಿಕೆಯ ಸಂಚಾಲಕರಾಗಿ ಹಲವಾರು ಮಂದಿಗೆ ಸಲಹೆ ಸಹಾಯ, ಮಾರ್ಗದರ್ಶನ ಮಾಡಿಕೊಟ್ಟಿದ್ದಾರೆ. ಕೃಷಿಯ ಬಗ್ಗೆಯೂ ಆಸಕ್ತಿ ಇರುವ ಇವರು ‘ಹಸುರು ಹೆಜ್ಜೆ' ಎಂಬ ಕೃತಿಯನ್ನು ಹೊರತಂದಿದ್ದಾರೆ. ದಿನ ಹಾಗೂ ಮಾಸ ಪತ್ರಿಕೆಗಳಿಗೆ ನಿರಂತರವಾಗಿ ಜಲಜಾಗೃತಿಯ ಬಗ್ಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ‘ಮೋಜಿನ ಗಣಿತ' ಮತ್ತು ಮನರಂಜನೆಗಾಗಿ ಬೀಜಗಣಿತ' ಇವರ ಅನುವಾದಿತ ಕೃತಿಗಳು.
ಅಡ್ಡೂರು ಕೃಷ್ಣ ರಾವ್…