ತಮ್ಮ ಜೀವನಾನುಭವವನ್ನು ಭಟ್ಟಿಯಿಳಿಸಿ “ಪುಟ್ಟ ತಮ್ಮನ ಕಗ್ಗ"ದಲ್ಲಿ ನಮಗೆ ಧಾರೆಯೆರೆದಿದ್ದಾರೆ ಅನಂತ ಭಟ್ ಪೊಳಲಿ ಅವರು. ನಾಲ್ಕುನಾಲ್ಕು ಸಾಲಿನ ಇಲ್ಲಿನ ಮುಕ್ತಕಗಳನ್ನು ಓದುವಾಗ ಕವಿತೆ ಇವರಿಗೆ ಒಲಿದು ಬಂದಿದೆ ಎಂಬುದು ಎದ್ದು ಕಾಣಿಸುತ್ತದೆ. ಅನಾಯಾಸವಾಗಿ ಮೂಡಿ ಬಂದಿರುವ ಚಿಂತನೆಗಳು ನಮ್ಮ ಮನ ಬೆಳಗಿಸುತ್ತವೆ.
"ನನ್ನ ನುಡಿ"ಯಲ್ಲಿ ಇವು “ಮಿಣುಕು ದೀಪಗಳ ಬೆಳಕ ಹಚ್ಚುವ" ಪ್ರಯತ್ನವೆಂದು ಇವುಗಳ ರಚನಾಕಾರ ಅನಂತ ಭಟ್ ಪೊಳಲಿ ಬರೆದಿದ್ದಾರೆ: “ಈ ಕೃತಿಯು ಒಂದು ಭಾವನಾತ್ಮಕವಾದ ವಿಷಯಗಳ ಸಂಗ್ರಹವಾಗಿದೆ. ಡಿ.ವಿ.ಜಿ.ಯವರ “ಮಂಕುತಿಮ್ಮನ ಕಗ್ಗ”ದ ಪ್ರಭಾವವು ಇದರ ಮೇಲೆ ಬೀರಿದೆ ಎಂದರೆ ತಪ್ಪಾಗಲಾರದು. ಇಲ್ಲಿ ಬಂದಿರುವ ವಿಚಾರಗಳೆಲ್ಲವೂ ಸ್ವಾನುಭವದ ಅಗ್ಗಿಷ್ಟಿಕೆಯಲ್ಲಿ ಸ್ಫುಟಗೊಂಡು ಬೆಳಗುವ, ನೈತಿಕ, ತಾತ್ವಿಕ, ವೈಚಾರಿಕ ಹಾಗೂ…