ಮೊರೆ

ಮೊರೆ

ಸರಿಸಿಬಿಡು ಮೂಢಮನ ಆವರಿತ ಪೊರೆಯಾ|


ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು||


ರೂಢಿರಾಡಿಯಡಿ ಸಿಲುಕಿ ತೊಳಲಾಡುತಿಹೆ ನಾನು|


ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||



 


ಬಲ್ಲಿದರ ನುಡಿಕೇಳಿ ನೇರಮಾರ್ಗದಿ ನಡೆದೆ|


ಬಸವಳಿದಿದೆ ಮನವು ಕಷ್ಟಗಳ ಕೋಟಲೆಗೆ ||


ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ|


ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||



 


ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ|


ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ||


ಹುಲುಮನುಜ ನಾನಾಗಿ ಭಾವಬಂಧಿಯು ನಾನು|


ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||


**********************


-ಕ.ವೆಂ.ನಾಗರಾಜ್.


(ನನ್ನ ಈ ರಚನೆಯನ್ನು 'ವೇದಸುಧೆ' ಅಂತರ್ಜಾಲ ತಾಣದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶ್ರೀಮತಿ ಲಲಿತಾ ರಮೇಶರು ಹಾಡಿದ್ದು, ಇದನ್ನು http://vedasudhe.blogspot.com/2011/01/blog-post_06.html  ಇಲ್ಲಿ ಕೇಳಬಹುದು.)

Rating
No votes yet

Comments