ಮೂಢ ಉವಾಚ - 74

ಮೂಢ ಉವಾಚ - 74

ಬಯಕೆಗಳಿರೆ ಬಡವ ಸಾಕೆಂದರದುವೆ ಸಿರಿ
ನಾನೆಂಬುದು ಅಜ್ಞಾನ ನನದೇನೆನಲು ಜ್ಞಾನ |
ದಾಸನಾದರೆ ಹಾಳು ಒಡೆಯನಾದರೆ ಬಾಳು
ಮನದೊಡೆಯನಾದವನೆ  ಮಾನ್ಯ ಮೂಢ ||


 


ಬಯಸದಿರುವವರಿಹರೆ ಈ ಜಗದಿ ಸಂಪತ್ತು
ಪರರ ಮೀರಿಪ ಬಯಕೆ ತರದಿರದೆ ಆಪತ್ತು |
ಸಮಚಿತ್ತದಿಂ ನಡೆದು ಕರ್ಮಫಲದಿಂ ಪಡೆದ
ಜ್ಞಾನ ಸಂಪತ್ತಿಗಿಂ ಮಿಗಿಲುಂಟೆ ಮೂಢ ||
 


**********************


-ಕ.ವೆಂ.ನಾಗರಾಜ್.

Rating
No votes yet

Comments