ಮೂಢ ಉವಾಚ - 157

ಮೂಢ ಉವಾಚ - 157

 

ಕರ್ಮಕಿಂ ಮಿಗಿಲು ಜ್ಞಾನಕಿಂ ಮಿಗಿಲು

ಯೋಗಕಿಂ ಮಿಗಿಲು ಭಕ್ತಿಯ ಹೊನಲು |

ಮೂರರ ಗುರಿಯೆ ಭಕ್ತಿ ತಾನಾಗಿರಲು

ಭಕ್ತಿಯೇ ಸಿರಿ ನೀನರಿಯೊ ಮೂಢ || ..313


ಭಕ್ತಿಯದು ಸಿದ್ಧಿಸಲು ಏಕಾಂತವಿರಬೇಕು

ದೇವ ಸುಜನರೊಡೆ ಕೂಡಿಯಾಡಲುಬೇಕು |

ಗುರುಕರುಣೆಯಲಿ ನಲಿಯುತಿರಬೇಕು 

ನಿರ್ಮಮದಿ ಸಚ್ಚಿದಾನಂದ ಮೂಢ || ..314

******************

-ಕ.ವೆಂ.ನಾಗರಾಜ್.

Rating
No votes yet

Comments