ಒಂದು ಸರಳ ಸುಂದರ ಕವಿತೆ

ಒಂದು ಸರಳ ಸುಂದರ ಕವಿತೆ

‘ಮಳೆಯ ಮೇಲೇಕೆ ದೂರು?’ ಎಂಬ ಸತೀಶ್ ಅವರ ಬ್ಲಾಗ್ ಓದಿ, ಪಲ್ಲವಿಯವರು ಬರೆದ ಪ್ರತಿಕ್ರಿಯೆ ಓದಿದಾಗ ನನಗೆ ನೆನಪಾದ ಈ ಕವಿತೆ ಇಲ್ಲಿ ಕಳಿಸಿದ್ದೇನೆ
ಇಕ್ಕಳ
ಚಳಿಗಾಲ ಬಂದಾಗ, ‘ಎಷ್ಟು ಚಳಿ’ ಎಂದರು,
ಬಂತಲ್ಲ ಬೇಸಿಗೆ, ‘ಕೆಟ್ಟ ಬಿಸಿಲೆಂ’ದರು;
ಮಳೆ ಬಿತ್ತೊ, ‘ಬಿಡದಲ್ಲ ಶನಿ!’ ಎಂಬ ಟೀಕೆ;
ಇವರು ಮೆಚ್ಚುವ ವಸ್ತು ಇಲ್ಲಿಲ್ಲ, ಜೋಕೆ!
ಚಿಗುರ ಚಿನ್ನದ ನಡುವೆ ಹೂವ ಬಯಸುವರು;
ಹೂಗಳ ಕಾಲದಲಿ ಹಣ್ಣ ಹೊಗಳುವರು;
‘ಹಣ್ಣಿನ ಗಾತ್ರ ಪೀಚು’ ಎಂದಿವರ ಟೀಕೆ;
ಇವರು ಮೆಚ್ಚುವ ವಸ್ತು ಇಲ್ಲಿಲ್ಲ, ಜೋಕೆ!
ನಿಂತರೆ ಕೇಳುವರು: ನೀನೇಕೆ ನಿಂತೆ?
ಮಲಗಿದರೆ ಗೊಣಗುವರು: ನಿನಗಿಲ್ಲ ಚಿಂತೆ!
ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ,
ಇವರು ಮೆಚ್ಚುವ ವಸ್ತು ಇಲ್ಲಿಲ್ಲ, ಜೋಕೆ!
ಓದಿದರೆ ಹೇಳುವರು: ಮತ್ತೊಮ್ಮೆ ಬರೆಯೊ!
ಬರೆದಿಡಲು ಬೆದಕುವರು: ಬರವಣಿಗೆ ಸರಿಯೊ?
ಇವರ ಬಯಕೆಗಳೇನೋ ಇವರದೇ ಟೀಕೆ,
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
ಈ ಅದ್ಭುತ ಕವಿತೆಯನ್ನು ರಚಿಸಿದವರು ಒಲುಮೆಯ ಕವಿ ಕೆ.ಎಸ್.ನರಸಿಂಹಸ್ವಾಮಿ.

Rating
Average: 5 (3 votes)

Comments