ಕಾಲದ ಕಲಿತನ
ಕಾಲಕ್ಕೆ ತಕ್ಕಂತೆ ಕಲಿಸುವ ವಿಧಾನ ಬದಲಾದ ಬಗೆ- ಅಲ್ಲಮಪ್ರಭುವಿನ ವಚನ.
ಕೃತಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬಡಿದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ತ್ರೇತಾಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬೈದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ದ್ವಾಪರ ಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಝಂಕಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಕಲಿಯುಗದಲ್ಲಿ
ಶ್ರೀಗುರು ಶಿಷ್ಯಂಗೆ ವಂದಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಗುಹೇಶ್ವರ,
ನಿಮ್ಮ ಕಾಲದ ಕಟ್ಟಳೆಯ ಕಲಿತನಕ್ಕೆ ನಾ ಬೆಱಗಾದೆನು.
Rating
Comments
ಉ: ಕಾಲದ ಕಲಿತನ
In reply to ಉ: ಕಾಲದ ಕಲಿತನ by savithru
ಉ: ಕಾಲದ ಕಲಿತನ