ರಾಜಕಾಲುವೆ ತೆರವಿಗೆ ಇನ್ನೆಷ್ಟು ವರ್ಷ ಬೇಕು?
1 day 16 hours ago - Ashwin Rao K Pಬೆಂಗಳೂರಿನಲ್ಲಿ ಕಳೆದ ಮೇ ೬ ರಿಂದ ೧೨ ರ ನಡುವೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ೧ ಸಾವಿರಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಅಲ್ಪಸ್ವಲ್ಪ ಮಳೆಗೇ ರಸ್ತೆಗಳಲ್ಲಿ ನೀರು ನೀರು ನಿಲ್ಲುತ್ತಿರುವುದಕ್ಕೆ ಕಾರಣ ರಾಜಕಾಲುವೆಗಳ ಒತ್ತುವರಿ. ಬೆಂಗಳೂರಿನಲ್ಲಿ ಒತ್ತುವರಿ ಆಗಿರುವ ರಾಜಕಾಲುವೆ ತೆರವುಗೊಳಿಸುವ ಮೂಲಕ ಮಾತ್ರ ನೆರೆ ಭೀತಿಯಿಂದ ಬೆಂಗಳೂರಿನ ಜನರನ್ನು ರಕ್ಷಿಸಲು ಸಾಧ್ಯ. ಇಲ್ಲವಾದಲ್ಲಿ ಪ್ರತಿ ಮಳೆಗೂ ಜನರು ಆತಂಕದಿಂದ ಬದುಕಬೇಕಾಗುತ್ತದೆ. ಈ ಹಿಂದೆ ಅಧಿಕಾರದಲ್ಲಿದ್ದ ಎಲ್ಲ ಪಕ್ಷಗಳೂ ಅನೇಕ ಬಾರಿ ರಾಜಕಾಲುವೆಗಳ ಒತ್ತುವರಿಗೆ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಬಡವರು, ಮಧ್ಯಮ ವರ್ಗದವರ ಮನೆಗಳಿದ್ದರೆ ಇಷ್ಟೊತ್ತಿಗಾಗಲೇ ನೆಲಸಮವಾಗಿರುತ್ತಿದ್ದವು. ಆದರೆ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಬಹುತೇಕರು ರಾಜಕಾರಣಿಗಳು, ಸಿನೆಮಾ ನಟರು, ಹಣ ಹೊಂದಿರುವವರು, ದೊಡ್ಡ ದೊಡ್ಡ ಬಿಲ್ಡರ್ ಗಳು. ಹೀಗಾಗಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರಾಜಕಾಲುವೆ ತೆರವುಗೊಳಿಸುವಲ್ಲಿ ಯಶಸ್ಸು ಕಾಣುತ್ತಿಲ್ಲ. ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯ ಎಂಬುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.
ಆದ್ದರಿಂದ ರಾಜ್ಯ ಕಾಂಗ್ರೆಸ್ ಸರಕಾರವು ಯಾವ ಪ್ರಭಾವಿ ವ್ಯಕ್ತಿಗಳಿಗೆ ಮಣಿಯದೇ ರಾಜಕಾಲುವೆ ಒತ್ತುವರಿ ತೆರವು ಗೊಳಿಸಲು ಸನ್ನದ್ಧವಾಗಬೇಕು. ಆ ಮೂಲಕ ಎಲ್ಲರಿಗೂ ಒಂದೇ ನ್ಯಾಯ ಎಂಬ ಸಂದೇಶವನ್ನು ರವಾನಿಸಬೇಕು. ಅಲ್ಲದೆ, ಮಳೆ ನೀರನ್ನು ಬಳಸಿಕೊಂಡು ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿಯನ್ನೂ ದೂರ ಮಾಡುವತ್ತ ಚಿಂತನೆ ಮಾಡಬೇಕು. ಬೆಂಗಳೂರಿನಲ್ಲಿರುವ ತಗ್ಗು ಪ್ರದೇಶಗಳನ್ನು ಗುರುತಿಸಿ, ಇಂಗುಗುಂಡಿಗಳನ್ನು ನಿ… ಮುಂದೆ ಓದಿ...