ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ...
1 day 15 hours ago - Shreerama Diwanaಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ. ದಾನಿಗಳಿಂದ ಒಂದಷ್ಟು ಹಣ ಸಂಗ್ರಹಿಸಿ, ತನ್ನದೇ ಒಂದು ತಂಡ ಕಟ್ಟಿಕೊಂಡು, ಈ ರೀತಿ ಊರೂರು ಸುತ್ತುತ್ತಾ ಸರ್ಕಾರಿ ಶಾಲೆಗಳನ್ನು ಸುಂದರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಸಮಾಜ ಕೂಡ ಅದನ್ನು ಗುರುತಿಸಿ ಆಕೆಗೆ ಪ್ರೋತ್ಸಾಹಿಸುತ್ತಾ, ಪ್ರಶಸ್ತಿ ಸನ್ಮಾನ ನೀಡುತ್ತಾ, ಗೌರವಿಸುತ್ತಿದೆ.
ನಿಜಕ್ಕೂ ಬದುಕಿನ ಸಾರ್ಥಕತೆ ಅಡಗಿರುವುದೇ ಇಲ್ಲಿ. ನೆಪೋಲಿಯನ್ ಬೋನಾಪಾರ್ಟೆ ಎಂಬ ಫ್ರಾನ್ಸಿನ ಕ್ರಾಂತಿಕಾರಿ ಹೀಗೆ ಹೇಳುತ್ತಾನೆ "ನಾವು ಹುಟ್ಟಿದ ಮೇಲೆ ನಾವಿಡುವ ಪ್ರತಿ ಹೆಜ್ಜೆಯಲ್ಲೂ ಒಂದೊಂದು ಗುರುತು ಬಿಟ್ಟು ಹೋಗಬೇಕು " ಇಡೀ ಸಮಾಜ ಎಷ್ಟೇ ಅಧೋಗತಿಯ ಕಡೆ ಚಲಿಸುತ್ತಿದ್ದರು ಇಂತಹ ಕೆಲವರ ಸೇವೆಗಳು ಸಮಾಜ ಇನ್ನೂ ತನ್ನ ಘನತೆಯನ್ನು ಕಾಪಾಡಿಕೊಳ್ಳಲು ಕಾರಣವಾಗಿದೆ.
ಎಷ್ಟೋ ಜನ ಬಡ ಮಕ್ಕಳಿಗೆ ಉಚಿತವಾಗಿ ಆಹಾರ ಶಿಕ್ಷಣ ವಸತಿ ನೀಡುವ ಕೆಲಸ ಈಗಲೂ ಮಾಡುತ್ತಿದ್ದಾರೆ. ಅನೇಕರು ಪರಿಸರದ ಉಳಿವಿಗಾಗಿ ನಿರಂತರವಾಗಿ ಶ್ರಮ ಪಡುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಬಹಳಷ್ಟು ಜನ ಭ್ರಷ್ಟಾಚಾರದ ವಿರುದ್ಧವೂ ಸದಾ ಕಾಲ ಎಲ್ಲಾ ಕಷ್ಟಗಳನ್ನು, ಜೀವ ಭಯಗಳನ್ನು ಸಹಿಸಿಕೊಂಡು ಹೋರಾಡುತ್ತಿದ್ದಾರೆ. ನಮ್ಮ ನಡೆ ಅಸ್ಪೃಶ್ಯತೆ ಮುಕ್ತ ಭಾರತದೆಡೆಗೆ ಎಂದು ಕೋಲಾರದ ಅರಿವು ಸಂಸ್ಥೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸುತ್ತಿದೆ. ಗ್ರಂ… ಮುಂದೆ ಓದಿ...