ಹಿಂದು - ಮುಸ್ಲಿಂ ಎಂಬ ಜ್ವಾಲಾಮುಖಿ…!
1 day 17 hours ago - Shreerama Diwanaಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ? ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ ಮೂಲೆಯಲ್ಲಿ ಕಾಡುತ್ತಲೇ ಇರುತ್ತದೆ. ಆ ಜ್ವಾಲಾಮುಖಿಯ ಹೆಸರು ಹಿಂದು ಮುಸ್ಲಿಂ.
ಹೌದು, ಈ ದೇಶ ಯಾವಾಗ ಬೇಕಾದರೂ ಆ ಕೋಮುದಳ್ಳುರಿಗೆ ಬಲಿಯಾಗಬಹುದು ಅಥವಾ ವಿಭಜನೆಯಾಗಬಹುದು. ಏಕೆಂದರೆ ಈ ವಿಷಯ ತಂತಿ ಮೇಲಿನ ನಡಿಗೆಯಂತೆ. ಇಲ್ಲಿಯವರೆಗೆ ಹೇಗೋ ಸಮಾಧಾನಕರವಾಗಿ ಸಣ್ಣಪುಟ್ಟ ಘಟನೆಗಳಲ್ಲಿಯೇ ಪರಿಹಾರವಾಗಿ ಮುಂದೆ ಹೋಗುತ್ತಿದೆ. ಆದರೆ ಈ ಚುನಾವಣೆಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ ವಿಷಯವನ್ನು ಹೆಚ್ಚು ಹೆಚ್ಚು ಮುನ್ನೆಲೆಗೆ ತರುತ್ತಿದ್ದಾರೆ. ಅವರಿಗೆ ಈ ಸಂದರ್ಭದಲ್ಲಿ ಚುನಾವಣೆ ಎನ್ನುವ ತಂತ್ರಗಾರಿಕೆ ಮತ್ತು ಮತಗಳ ಕ್ರೊಢೀಕರಣದ ಅವಶ್ಯಕತೆ ಕಾಣಿಸಿರಬಹುದು. ಹಾಗೆಯೇ ಅದಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಸಹ ಈ ಚುನಾವಣೆ ಗೆಲ್ಲಲು ಇನ್ನೊಂದು ರೀತಿಯ ಹೇಳಿಕೆಗಳನ್ನು ಕೊಡುತ್ತಾ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತಿದ್ದಾರೆ.
ಅಂತಿಮವಾಗಿ ಚುನಾವಣೆಯಲ್ಲಿ ಯಾರೋ ಒಬ್ಬರು ಗೆಲ್ಲಬಹುದು, ಆದರೆ ಅವರು ಮಾಡಿ ಹೋದ ಅನಾಹುತಗಳು ದೀರ್ಘಕಾಲ ಉಳಿಯಬಹುದು ಅಥವಾ ಅಪಾಯಕಾರಿಯಾಗಿ ಈ ದೇಶದಲ್ಲಿ ಕೋಮುದಳ್ಳುರಿ ನಡೆಯಬಹುದು ಅಥವಾ ವಿಭಜನೆಯ ಕೂಗುಗಳು ಮತ್ತಷ್ಟು ತೀವ್ರತೆ ಪಡೆಯಬಹುದು. ಏಕೆಂದರೆ ಈಗಿನ ಸಾಮಾಜಿಕ ಸಮೂಹ ಸಂಪರ್ಕ ಜಾಲಗಳ ಸಂದರ್ಭದಲ್ಲಿ ಚುನಾವಣಾ ಭಾಷಣಗಳು ಕೇವಲ ಕೆಲವೇ ಸ್ಥಳಗಳಿಗೆ ಸೀಮಿತವಾಗಿರುವುದಿಲ್ಲ. ಅದು ಇಡೀ ದೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಚ… ಮುಂದೆ ಓದಿ...