ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು, ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು. ಅಂದರೆ ಇವರನ್ನು ವಾಚಾಮಗೋಚರವಾಗಿ ಟೀಕಿಸಬಹುದು ).....
ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ. ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ? ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ ತಂಗಿ ಅಣ್ಣ ಅಕ್ಕ ಅಪ್ಪ ಅಮ್ಮ ಮಕ್ಕಳಲ್ಲಿ ಒಬ್ಬರಾಗಿರಬೇಕಲ್ಲವೇ ? ಆದರೂ ಏಕೆ ವ್ಯವಸ್ಥೆ ಹೀಗಿದೆ? ಸಮಸ್ಯೆ ಇರುವುದೇ ಇಲ್ಲಿ.
ಸಮಾಜದ ಒಟ್ಟು ಹಿತದ ದೃಷ್ಟಿಯಲ್ಲಿ ನಾವು ಇವರನ್ನು ನೋಡುವುದಿಲ್ಲ. ನಮ್ಮ ವೈಯಕ್ತಿಕ ಬದುಕಿನ ಸ್ವಾರ್ಥದ ಹಿತದಿಂದ ಇವರನ್ನು ಗುರುತಿಸುತ್ತೇವೆ. ಹೆಚ್ಚು ಲಂಚ ತಂದು, ಮನೆ ಕಾರು ಒಡವೆ ಪ್ರವಾಸ ಮುಂತಾದ ಮೋಜು ಮಾಡುವ ವ್ಯಕ್ತಿ, ಹೆಂಡತಿ ಮಕ್ಕಳಿಗೆ, ತಂದೆ ತಾಯಿಗಳಿಗೆ ಅತ್ಯಂತ ಪ್ರೀತಿ ಪಾತ್ರವಾಗುತ್ತಾನೆ. ಗಂಡನಿಗೆ ಅಥವಾ ಮಗನಿಗೆ ಬರುವ ಸಂಬಳದಲ್ಲಿ ಇಷ್ಟೊಂದು ಅದ್ದೂರಿ ಜೀವನ ಸಾಧ್ಯವಿಲ್ಲ. ಇದು ಲಂಚದ ಹಣವೇ ಎಂದು ಗೊತ್ತಿದ್ದರೂ ಅದನ್ನು ಸಾಮಾನ್ಯವಾಗಿ ಯಾರೂ ಪ್ರಶ್ನಿ…
ಮುಂದೆ ಓದಿ...