ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ೧೯೧೫ರ ಜೂನ್ ೮ ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಸಹ ಹೋರಾಟ ಮಾಡಿದವರು..
ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನು ರಚಿಸಿದ್ದಾರೆ. ಕಾರ್ನಾಡ ಸದಾಶಿವರಾವ, ರತ್ನರಾಜಿ, ಏ.ಬಿ.ಶೆಟ್ಟಿ ಮೊದಲಾದವರ ಜೀವನಚರಿತ್ರೆಗಳನ್ನು ಬರೆದು ಪ್ರಕಟಿಸಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಅವರ ಬಗೆಗೆ ಮೂರು ಗ್ರಂಥಗಳನ್ನು ಬರೆದಿದ್ದಾರೆ. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಶ್ರೇಷ್ಠ ಅಧ್ಯಾಪಕ ರಾಷ್ಟ್ರಪ್ರಶಸ್ತಿ, 'ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪದವಿ, ಹಂಪಿ ವಿಶ್ವವಿದ್ಯಾಲಯದ, ನಾಡೋಜ ಪ್ರಶಸ್ತಿ, ಕರ್ನಾಟಕ ಸರಕಾರದ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ, ಪಂಪ ಪ್ರಶಸ್ತಿ ಲಭಿಸಿವೆ. ೨೦೧೫ರ ಆಗಸ್ಟ್ ೯ ರಂದು ನಿಧನರಾದರು.
ಕಯ್ಯಾರರು ಬರೆದ ಒಂದು ಕವನ ‘ಹೊಸಗನ್ನಡ ಕಾವ್ಯಶ್ರೀ’ ಕೃತಿಯಲ್ಲಿ ಪ್ರಕಟವಾಗಿದೆ. ಅದನ್ನು ಆಯ್ದು ಇಲ್ಲಿ ನೀಡಲಾಗಿದೆ.
ಐಕ್ಯಗಾನ
೧.
ಐಕ್ಯವೊಂದೇ ಮಂತ್ರ,
ಐಕ್ಯದಿಂದೆ ಸ್ವಾತಂತ್ರ,
ಐಕ್ಯಗಾನದಿ ರಾಷ್ಟ್ರ
ತೇಲುತಿರಲಿ !
ಭಾರತದಿ ಮಮ ಜನ್ಮ
ಸ್ವಾತಂತ್ರ್ಯವೇ ಧರ್ಮ
-ಒಕ್ಕೊರಲಿನುದ್ಭೋಷ
ಕೇಳುತಿರಲಿ !
೨.
ಹೊಲೆಯರೇ ಬ್ರಾಹ್ಮಣರೇ,
ಮುಸ್ಲಿಮರೆ ಕ್ರಿಶ…
ಮುಂದೆ ಓದಿ...