ತಾಪಮಾನ - ಬರಗಾಲ - ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು? ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ.
ಚುನಾವಣೆಗಳು, ಪರೀಕ್ಷಾ ಫಲಿತಾಂಶಗಳು, ಶೇರು ಮಾರುಕಟ್ಟೆ, ಬಂಗಾರದ ಬೆಲೆ, ಧಾರ್ಮಿಕ ಆಚರಣೆಗಳು, ಭ್ರಷ್ಟಾಚಾರ ಇದೆಲ್ಲವೂ ತದನಂತರ. ಮೊದಲು ಬದುಕು ಮುಖ್ಯವಲ್ಲವೇ, ಬದುಕೇ ಇಲ್ಲದೆ, ಆರೋಗ್ಯವೇ ಇಲ್ಲದ ಮೇಲೆ ಉಳಿದ ವಿಷಯಗಳನ್ನು ಚರ್ಚಿಸುವುದಾದರೂ ಹೇಗೆ, ಜೊತೆಗೆ ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಎಷ್ಟೋ ಕೆರೆಕಟ್ಟೆಗಳು ಒಣಗಿವೆ, ಕುಡಿಯಲು ಮನುಷ್ಯರಿಗೂ, ದನ ಕರುಗಳಿಗೂ, ಕಾಡುಪ್ರಾಣಿಗಳಿಗೂ ನೀರೇ ಇಲ್ಲ. ಬೆಳೆಗಳು ಸಂಪೂರ್ಣ ಒಣಗಿ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳ, ಸರ್ಕಾರಗಳ, ಆದ್ಯತೆ ಏನಾಗಿದೆ ಎಂಬುದೇ ನಾಚಿಕೆಗೇಡಿನ ವಿಷಯವಾಗಿದೆ.
ಮಾನನಷ್ಟ - ಮಾನಹಾನಿ - ಸೇಡು - ಅಸೂಯೆ - ಆರೋಪ - ದ್ವೇಷ - ಸೀಡಿ - ಪೆನ್ ಡ್ರೈವ್ - ಕಾಮಪುರಾಣ ಇವುಗಳ ನಡುವೆ, ಮರೆಯಾಗುತ್ತಿರುವ ಪರಿಸರ, ಆರೋಗ್ಯ, ಮಾನ ಮರ್ಯಾದೆ, ಜೀವ ಹಾನಿ, ಸರ್ಕಾರ, ಮಾಧ್ಯಮಗಳ ಮತ್ತು ಜನಸಾಮಾನ್ಯರ ಅರಿವಿಗೆ ಬರುತ್ತಿಲ್ಲ ಎಂದು ಕಾಣುತ್ತದೆ. ಜೀವವಿದ್ದರೆ ಜೀವನ, ಜೀವನವಿದ್ದರೆ ಮಾನ ಮರ್ಯಾದೆ. ಈಗ ಜೀವಕ್ಕೇ ಕುತ್ತು ತರುತ್ತಿರುವ ಬರಗಾಲ, ಅತಿಯಾದ ತಾಪಮಾನವನ್ನು ನಾವು ನಿರ್ಲಕ್ಷ…
ಮುಂದೆ ಓದಿ...