ಸ್ವಲ್ಪ ಖಾರವಾಗಿ ಯೋಚಿಸಿ ನೋಡಿ. ಎಂತಹ ಅನಾಗರಿಕ ವ್ಯವಸ್ಥೆಯಲ್ಲಿ ನಾವಿದ್ದೇವೆ ಎಂಬ ಅರಿವಾಗಬಹುದು. ಗೊತ್ತೇನ್ರೀ ನಿಮಗೆ ? ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಈ ಬಾರಿ ರಾಜ್ಯದ ಯಾವ ಪ್ರದೇಶದಲ್ಲಿ ಎಷ್ಟು ಮಳೆಯಾಗುತ್ತದೆ ಎಂದು. ಗೊತ್ತೇನ್ರೀ ನಿಮಗೆ?
ಈ ರಾಜ್ಯದಲ್ಲಿ, ಒಂದು ವರ್ಷದಲ್ಲಿ, ಯಾವ ಯಾವ ಪ್ರದೇಶದಲ್ಲಿ, ಜನ ಯಾವ ಯಾವ ಹಣ್ಣು ತರಕಾರಿ ಸೊಪ್ಪು ಬೇಳೆಕಾಳುಗಳು ಮುಂತಾದ ಆಹಾರ ಪದಾರ್ಥಗಳನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸುತ್ತಾರೆ ಅಂತ. ಗೊತ್ತೇನ್ರೀ ನಿಮಗೆ?
ಯಾವ ಯಾವ ಬೆಳೆ ಬೆಳೆಯಲು ಎಷ್ಟು ಹಣ ಬೇಕು, ಎಷ್ಟು ಮಾನವ ಸಂಪನ್ಮೂಲ ಬೇಕು, ಎಷ್ಟು ರಸಗೊಬ್ಬರ ಬೇಕು, ಎಷ್ಟು ಮುಂಜಾಗ್ರತೆಯ ಕ್ರಮ ಕೈಗೊಳ್ಳಬೇಕು ಎಂದು. ಗೊತ್ತೇನ್ರೀ ನಿಮಗೆ? ಫಸಲು ಬಂದ ಮೇಲೆ ಅದನ್ನು ಎಲ್ಲಿ ಮಾರಬೇಕು, ಹೇಗೆ ಮಾರಬೇಕು, ಯಾವ ಬೆಲೆಗೆ ಮಾರಬೇಕು, ಯಾವ ಸಾರಿಗೆ ಉಪಯೋಗಿಸಬೇಕು ಅಂತ. ಗೊತ್ತೇನ್ರೀ ನಿಮಗೆ?
ಫಸಲಿನಿಂದ ನಷ್ಟ ಉಂಟಾದರೆ ಅದರ ಪರಿಣಾಮ ಹೇಗೆ ಎದುರಿಸಬೇಕು/ ಲಾಭ ಬಂದರೆ ಅದು ಯಾವ ರೀತಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು. ಗೊತ್ತೇನ್ರೀ ನಿಮಗೆ? ಇಳುವರಿ ಹೆಚ್ಚಾಗಿ ಬೇಡಿಕೆ ಕಡಿಮೆಯಾದರೆ ಎಲ್ಲಿಗೆ ರಪ್ತು ಮಾಡಬೇಕು. ಬೇಡಿಕೆ ಹೆಚ್ಚಾಗಿ ಪೂರೈಕೆ ಕಡಿಮೆಯಾದರೆ ಹೇಗೆ ರೈತರು ಗ್ರಾಹಕರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಬೇಕು ಅಂತ. ಖಂಡಿತ ಸರಿಯಾಗಿ ಗೊತ್ತಿಲ್ಲ. ಏನೋ ಒಂದು ಕಾಟಾಚಾರದ ಅವಾಸ್ತವಿಕ ಸರ್ಕಾರಿ ಅಂಕಿಅಂಶಗಳ ಲೆಕ್ಕ ಕೊಡುತ್ತಾರೆ. ಬೇಕಾದರೆ ಈ ಲೆಕ್ಕ ಕೇಳಿ, ಎಷ್ಟು ಖಚಿತವಾಗಿ ಹೇಳುತ್ತಾರೆ.
ರಾಜ್ಯದ ಪ್ರತಿ ಚುನಾವಣಾ ಕ್ಷೇತ್ರಗಳಲ್ಲಿ ಒಕ್ಕಲಿಗರು/ಕುರುಬರು/ದಲಿತರು/ಲಿಂಗಾಯತ - ವೀರಶೈವರು/ ಬ್ರಾಹ್ಮಣರು/ ಹಿಂದುಳಿದ ವರ್ಗದವರು/ ಮುಸ್ಲೀಮರು/ಕ್ರಿಶ್ಚಿಯನ್ ಮುಂತಾದ ಪ್ರತಿ ಜಾತಿ ಧರ್…
ಮುಂದೆ ಓದಿ...