ಮಾನವೀಯ ಮೌಲ್ಯಗಳ ಹರಿಕಾರ : ಬಸವಣ್ಣನವರು
1 day 19 hours ago - ಬರಹಗಾರರ ಬಳಗಬಸವಣ್ಣ ಈ ಜಗತ್ತು ಕಂಡ ಒಬ್ಬ ಶ್ರೇಷ್ಠ ಮೌಲ್ಯಾಧಾರಿತ ದಾರ್ಶನಿಕ, ಮದ್ಯಯುಗದ ಸಾಮಾಜಿಕ ಕ್ರಾಂತಿಯ ಹರಿಕಾರ. ಭಕ್ತಿ ಮತ್ತು ಅರಿವುಗಳನ್ನು ಪ್ರತಿಪಾದಿಸಿ ಜನಸಾಮಾನ್ಯರ ಭಾಷೆಯಲ್ಲೇ ಪ್ರಬಲ ಮತ್ತು ವೈಚಾರಿಕವಾಗಿರುವ ತತ್ವಗಳನ್ನು ಬಿತ್ತಿದ ಕಾರುಣಿಕ ಮಹಾಪುರುಷ. ಒಬ್ಬ ಸಮಾಜವಾದಿ, ಪ್ರಜಾವಾದಿ, ಸಾಮಾಜಿಕ ನ್ಯಾಯ ಪರಿಪಾಲಕ ಮತ್ತು ಮಾನವ ಹಕ್ಕುಗಳ ಪ್ರತಿಪಾದಕ ವಿಶ್ವದ ಶ್ರೇಯೋಅಭಿವೃದ್ದಿಗಾಗಿ ಹಗಲಿರುಳು ದುಡಿದ ವಿಶ್ವ ಚೇತನರಾಗಿ, ಜಾತಿ ವ್ಯವಸ್ಥೆಯ ವಿರುದ್ಧ ಹಾಗೂ ಮೂಢನಂಬಿಕೆ, ಸಾಮಾಜಿಕ ತಾರತಮ್ಯದ ವಿರುದ್ಧ ಸದಾ ದ್ವನಿಯೇತ್ತಿ ಜನಪರವಾದ ಕಾಯಕ ಸೇವೆ ಮಾಡಿದ್ದ ವಿಶ್ವ ಪ್ರಜಾಪ್ರಭುತ್ವದ ಪಿತಾಮಹ ಅಣ್ಣ ಬಸವಣ್ಣ.
ಬಸವಣ್ಣ ಮ್ಯಾಗ್ನಕಾರ್ಟ್ ಒಪ್ಪಂದಕ್ಕಿಂತ ಅರ್ಧ ಶತಮಾನದ ಹಿಂದೆಯೇ ಕಲ್ಯಾಣದಲ್ಲಿ ಅನುಭವ ಮಂಟಪವೆಂಬ ವಿಶ್ವಮಾನ್ಯ ಪ್ರಜಾಪ್ರಭುತ್ವದ ಕಲ್ಪನೆಯಾದ ಸಂಸತ್ತ ಭವನವನ್ನು ನಿರ್ಮಿಸಿ,ಜಾಗತಿಕ ಲೋಕಕ್ಕೆ ಸಮತಾವಾದ ಸಮಾನತೆಯ ಸಂದೇಶವನ್ನು ಸಾರುವ, ಎತ್ತಿ ಹಿಡಿಯುವ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿದಾರೆ. ಮಾಡಿದ ಪ್ರತಿಫಲದಿಂದಲೇ ಇಂದು ಜಾಗತಿಕ ಸಮುದಾಯ ಅವರನ್ನು ಸದಾ ಸ್ಮರಣೆ ಮಾಡಿಕೊಳ್ಳುತ್ತದೆ.ತರುವಾಯ ವಚನ ಸಾಹಿತ್ಯ ಅನುಭಾವದ ಬುತ್ತಿ ಲೋಕ ಕಲ್ಯಾಣಕ್ಕೆ ಸದ್ಬಳಕೆ ಯಾಗುತ್ತಿದೆ.
ಹಾಗಾಗಿ ಬಸವಣ್ಣನವರು ಅಂದು ಕಲ್ಯಾಣದಲ್ಲಿ ಮಾಡಿದ ಎಲ್ಲಾ ಪ್ರಜಾಪ್ರಭುತ್ವ ಪ್ರಯೋಗಗಳಲ್ಲಿ ಬಹಳಷ್ಟು ಪ್ರಯೋಗಗಳು ಜಗತ್ತಿನಲ್ಲಿ ನಡೆದ ಮೊದಲ ಪ್ರಯೋಗಗಳೇ ಆಗಿವೆ. ಎಲ್ಲದಕ್ಕೂ ಸಮಾಜ ಮುಖಿ ಸೇವೆಗಳ ಕಾರ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದರು. ರಾಜ್ಯಸಿಂಹಾಸನವನ್ನು ಅವರು ಕೆಣಕಲಿಲ್ಲ. ಆದರೆ ಶೂನ್ಯಸಿಂಹಾಸನ ಸೃಷ್ಟಿಸಿ ಪ್ರಜಾಪ್ರಭುತ್ವದ ಕನಸು ಬಿತ್ತಿದರು. ಅವರ ಅನುಭವ ಮಂಟಪದ ಅಮರಗಣಂಗಳಲ್ಲಿ ಎಲ್ಲಾ ಜಾತ… ಮುಂದೆ ಓದಿ...