ಪುಸ್ತಕ ಪರಿಚಯ

ಲೇಖಕರು: Ashwin Rao K P
October 09, 2023
ಮಕ್ಕಳಿಗಾಗಿ ಕಾದಂಬರಿ ಬರೆಯುವವರು ಅಪರೂಪದಲ್ಲಿ ಅಪರೂಪ. ಏಕೆಂದರೆ ಮಕ್ಕಳಿಗೆ ಸುದೀರ್ಘ ಓದು ಹಿಡಿಸುವುದಿಲ್ಲ. ಅಷ್ಟೊಂದು ತನ್ಮಯತೆಯಿಂದ ಓದಲು ಅವರಿಗೆ ಕಷ್ಟವಾಗುತ್ತದೆ. ಓದುತ್ತಾ ಓದುತ್ತಾ ಹಿಂದಿನ ಕಥೆ ಮರೆತುಹೋಗುತ್ತದೆ ಎಂಬೆಲ್ಲಾ ಆಪಾದನೆಗಳ ನಡುವೆ ಲೇಖಕರಾದ ಹ ಸ ಬ್ಯಾಕೋಡ ಅವರು “ಜುಟ್ಟಕ್ಕಿ" ಎನ್ನುವ ಸ್ವಾರಸ್ಯಕರವಾದ ಕಾದಂಬರಿಯನ್ನು ಹೊರತಂದಿದ್ದಾರೆ. ಈ ಕಾದಂಬರಿಗೆ ಅವರು ಬರೆದ ಲೇಖಕರ ಮಾತಿನಿಂದ ಆಯ್ದ ಕೆಲವು ಸಾಲುಗಳು ಇಲ್ಲಿವೆ... “ಅಕ್ಷರ ಕಲಿಕೆಗೂ ಮುನ್ನ ಮುಗ್ಧ ಮಕ್ಕಳಲ್ಲಿ ಸರಿ…
ಲೇಖಕರು: Ashwin Rao K P
October 06, 2023
ಝೆನ್ ಬೆರಗು (ಸಂಪುಟ- ೧)’ ಕನ್ನಡದ ಝೆನ್ ಕತೆಗಳು ಲೇಖಕಿ ಜಿ.ಆರ್. ಪರಿಮಳಾ ರಾವ್ ಅವರ ಅನುವಾದಿತ ಕತಾ ಸಂಕಲನ. ಈ ಕೃತಿಗೆ ಮಲ್ಲೇಪುರಂ ಜಿ. ವೆಂಕಟೇಶ್ ಅವರು ಮುನ್ನುಡಿ ಬರೆದಿದ್ದಾರೆ. ಕೃತಿಯ ಕುರಿತು ಬರೆಯುತ್ತಾ ಝೆನ್ ಎಂದರೆ 'ಧ್ಯಾನ' ಎಂದೇ ಅರ್ಥ. ಇದು ಬೌದ್ಧ ಪರಂಪರೆಯ ಮಾತು. 'ಝೆನ್ ಬುದ್ಧಿಸಂ' ಒಂದುಂಟು. ನಾವು ಮಾಡುವ 'ಝೆನ್ ಮಂತ್ರ' ಕತೆಯ ಆಕಾರ ತಾಳಿದಾಗ ಎಷ್ಟೆಷ್ಟು ಬಗೆಯ ವೈವಿಧ್ಯತೆಗೆ ಅವಕಾಶ ಕೊಡುಬಹುದೆಂಬುದನ್ನು ಜಿ.ಆರ್. ಪರಿಮಳಾ ರಾವ್ ತಮ್ಮ 'ಝೆನ್ ಬೆರಗು' ಕತೆಗಳ ಮಾಲೆಯಲ್ಲಿ…
ಲೇಖಕರು: addoor
October 05, 2023
“ಎಲೆ ಮರೆಯ ಹಣ್ಣುಗಳು" - ಮರೆಯಲ್ಲೇ ಉಳಿದ ದಿಟ್ಟ ಮಹಿಳೆಯರ ಬದುಕಿನ ಚಿತ್ರಣ ಎನ್ನುತ್ತದೆ ಉಪಶೀರ್ಷಿಕೆ. ಇದರಲ್ಲಿರುವ ಒಂಭತ್ತು ಮಹಿಳೆಯರ ಸಂಕಟಗಳ ಕಥನ ಓದುವಾಗ ಕಣ್ಣು ಮಂಜಾಗುತ್ತದೆ. "ದೇವರು ನನಗೇ ಯಾಕೆ ಇಂತಹ ಕಷ್ಟ ಕೊಟ್ಟ?” ಎಂದು ಹಲುಬುವ ಎಲ್ಲರೂ, ಮುಖ್ಯವಾಗಿ ಮಹಿಳೆಯರು ಓದಲೇ ಬೇಕಾದ ಪುಸ್ತಕವಿದು. ಇವುಗಳ ಹಿನ್ನೆಲೆಯ ಬಗ್ಗೆ "ಓದುವ ಮುನ್ನ”ದಲ್ಲಿ ಲೇಖಕಿ ಬರೆದಿರುವ ಮಾತುಗಳು: “ಜೀವನದಲ್ಲಿ ಎಂದೋ ಕೇಳಿದ ಸುದ್ದಿಗಳು, ನಡೆದ ಘಟನೆಗಳು, ಭೆಟ್ಟಿಯಾದ ವ್ಯಕ್ತಿಗಳು ಎಲ್ಲವೂ ನನ್ನ ನೆನಪಿನ…
ಲೇಖಕರು: Ashwin Rao K P
October 04, 2023
ರವಿ ಬೆಳಗೆರೆಯವರ ಅಕಾಲ ನಿಧನದ ಬಳಿಕ ಅವರು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಬರೆದ, ಪ್ರಕಟವಾಗದೇ ಉಳಿದಿದ್ದ, ಅಪೂರ್ಣವಾಗಿದ್ದ ಬರಹಗಳು ಒಂದೊಂದಾಗಿ ಪುಸ್ತಕರೂಪದಲ್ಲಿ ಹೊರ ಬರುತ್ತಿದೆ. ಅದೇ ಸಾಲಿಗೆ ಸೇರುವ ಒಂದು ಪುಸ್ತಕ ಇತ್ತೀಚೆಗೆ ಹೊರ ಬಂದಿದೆ. ಈ ಪುಸ್ತಕದ ಬಹಳಷ್ಟು ವಿಷಯಗಳನ್ನು ರವಿ ಬೆಳಗೆರೆ ತಮ್ಮ ‘ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಬರೆದಿದ್ದಾರೆ. ಒಂದು ಸಮಯದಲ್ಲಿ ನಕ್ಸಲ್ ಚಳುವಳಿಯ ಮೇಲೆ ಒಲವಿದ್ದ ರವಿ ಬೆಳಗೆರೆ ಪತ್ರಕರ್ತರಾಗಿದ್ದ ಸಮಯದಲ್ಲಿ ಪೀಪಲ್ಸ್ ವಾರ್ ಗ್ರೂಪ್ ಸಂಸ್ಥಾಪಕ…
October 03, 2023
ಹದಿನೈದು ಸಣ್ಣ ಕತೆಗಳ ಪುಟ್ಟ ಪುಸ್ತಕ. ಎಲ್ಲ ಕತೆಗಳನ್ನು ಓದಿ ಮುಗಿಸಿದ ಬಳಿಕ ಪ್ರತಿ ಕಥೆಯ ಪಾತ್ರಗಳೂ ಕಾಡುತ್ತವೆ. ಕಾರಣ ಕತೆಗಾರ್ತಿ ಕಟ್ಟಿಕೊಟ್ಟ ಬಗೆಯೇ ಹಾಗಿದೆ. ಬಹುಶಃ ಉತ್ತರ ಕನ್ನಡ ಜಿಲ್ಲೆಯ ಓದುಗರಿಗೆ ಹೆಚ್ಚು ಆಪ್ತವಾಗುವ ಸಂಕಲನ ಇದು. ಇಲ್ಲಿಯ ಭಾಷೆ, ಜನ, ಕಥೆಯ ಜಗತ್ತು ಮತ್ತು ಅಲ್ಲಿಂದಲೇ ಹೆಕ್ಕಿ ತಂದಂತಿರುವ ಪಾತ್ರಗಳು ನಮ್ಮ ಊರಲ್ಲೇ ಇದ್ದವರು ಅನ್ನಿಸುವಂತಿದೆ. ಹಾಗೆ ನೋಡಿದರೆ ಪ್ರತಿ ಮನೆಯಲ್ಲೂ ಕತೆಗೊಂದು ಪಾತ್ರ ದೊರೆಯುತ್ತದೆ. ಎಷ್ಟೋ ಮನೆಯ ಕತೆ ಒಂದಕ್ಕೊಂದು ತೀರಾ…
ಲೇಖಕರು: Ashwin Rao K P
September 30, 2023
ವೀರಲೋಕ ಪ್ರಕಾಶನ ಸಂಸ್ಥೆಯಿಂದ ಹೊರಬಂದಿರುವ ನಂದಿನಿ ಹೆದ್ದುರ್ಗ ಅವರ ಕವಿತೆಗಳ ಸಂಗ್ರಹ ‘ಒಂದು ಆದಿಮ ಪ್ರೇಮ. ತಮ್ಮ ಕವಿತೆಗಳ ಬಗ್ಗೆ, ಅವುಗಳು ಹುಟ್ಟಿದ ಸಮಯ ಮೊದಲಾದುವುಗಳ ಬಗ್ಗೆ ಖುದ್ದು ಕವಯತ್ರಿ ನಂದಿನಿ ಅವರು ತಮ್ಮ ಮೊದಲ ಮಾತಿನಲ್ಲಿ ಬರೆದದ್ದು ಹೀಗೆ… “ಮದ್ಯಾಹ್ನ ಮೌನವಾಗಿದೆ. ಥೇಟು ನನ್ನಂತೆ. ನನ್ನದು ಇಳಿಹೊತ್ತಾ ನಡುಮದ್ಯಾಹ್ನವಾ ತಿಳಿಯುತ್ತಿಲ್ಲ. ತಿಳಿದು ಮಾಡುವುದಾದರೂ ಏನು. ತೃಣಮಪಿ ನ ಚಲತಿ ತೇನವಿನಾ. ಕಾಲ ತನ್ನಷ್ಟಕ್ಕೆ ತಾನು ಎಳೆಬೆಳಗು ನಡುಬಿಸಿಲು ಇಳಿಸಂಜೆಯೂ ಹೌದು.…