ನೀರು ಜೀವಜಲ, ತೀರ್ಥದಂತೆ ಬಳಸೋಣ
ಮಂಗಳೂರಿನ ಜನರಿಗೆ ಮೇ 2023ರಿಂದ ನೀರಿನ ರೇಷನಿಂಗ್ ಶುರುವಾಗಿತ್ತು. ಅಂದರೆ, ಎರಡು ದಿನಕ್ಕೊಮ್ಮೆ ಕುಡಿನೀರು ಸರಬರಾಜು. ಎತ್ತರದ ಪ್ರದೇಶಗಳಿಗೆ ನೀರು ಹತ್ತದಿರುವ ಕಾರಣ, ಅಲ್ಲಿಗೆ ಟ್ಯಾಂಕರುಗಳಲ್ಲಿ ನೀರು ಒದಗಣೆ. ಮುಂಗಾರು ಮಳೆ ಬರುವ ತನಕ ಪರಿಸ್ಥಿತಿ ಹೀಗೆಯೇ ಮುಂದುವರಿಯಲಿದೆ. ಹಿಂದಿನ ಕೆಲವು ವರುಷಗಳಲ್ಲಿಯೂ ನೀರಿನ ಕೊರತೆ ತೀವ್ರವಾಗಿ, ನೀರಿನ ರೇಷನಿಂಗ್ ಜ್ಯಾರಿಯಾಗಿತ್ತು. ಅರುವತ್ತು ಕಿಮೀ ದೂರದ ಉಡುಪಿಯ ನೀರಿನ ಮೂಲವಾದ ಜಲಾಶಯದಲ್ಲಿಯೂ ಕೆಲವೇ ದಿನಗಳಿಗಾಗುವಷ್ಟೇ ನೀರುಳಿದಿದೆ.
2024ರ ಬೇಸಗೆಯಲ್ಲಿಯೂ ಮಂಗಳೂರು ಮತ್ತು ಉಡುಪಿಯಲ್ಲಿ ನಾಗರಿಕರಿಗೆ ನೀರಿನ ಲಭ್ಯತೆ ಆತಂಕಕಾರಿಯಾಗಿಯೇ ಮುಂದುವರಿದಿದೆ.
- Read more about ನೀರು ಜೀವಜಲ, ತೀರ್ಥದಂತೆ ಬಳಸೋಣ
- Log in to post comments