ಕುಡಿಯುವ ನೀರಿಗಾಗಿ ಜಗಳ - ಕೊಲೆಯಲ್ಲಿ ಅವಸಾನ
ನೀರಿಗಾಗಿ ಪರದಾಟದ ಕತೆಗಳನ್ನು ಕೇಳಿದ್ದೇವೆ; ಹೋರಾಟದ ಕತೆಗಳನ್ನೂ ಕೇಳಿದ್ದೇವೆ. ನೀರಿಗಾಗಿ ಕೊಲೆ ಮಾಡಿದ ಕತೆ ಗೊತ್ತೇ?
ಈ ಕರಾಳ ಪ್ರಕರಣ ನಡೆದದ್ದು ಭೋಪಾಲದ ಷಹಜೇಹಾನ್ಬಾದ್ ಪ್ರದೇಶದಲ್ಲಿ, ೧೩ ಮೇ ೨೦೦೯ರಂದು. ಅಲ್ಲಿನ ಸಂಜಯನಗರ ಬಸ್ತಿಯಲ್ಲಿ ಕುಡಿಯುವ ನೀರಿಗಾಗಿ ಆರಂಭವಾದ ಜಗಳ ಅವಸಾನವಾದದ್ದು ಚೂರಿ ಇರಿತದಿಂದ ಒಂದೇ ಕುಟುಂಬದ ತಂದೆ-ತಾಯಿ-ಮಗನ ಕೊಲೆಯಲ್ಲಿ! ಕೊಲೆಯಾದವರು ಜೀವನ್ ಮಾಳವೀಯ (೪೩ ವರುಷ), ಅವರ ಪತ್ನಿ ಸವಿತಾ ಮತ್ತು ಮಗ ರಾಜು (೧೯ ವರುಷ). ಕೊಲೆ ಮಾಡಿದವರು ದೀನೂ ಮತ್ತು ಅವನ ಸಂಗಡಿಗರು.
- Read more about ಕುಡಿಯುವ ನೀರಿಗಾಗಿ ಜಗಳ - ಕೊಲೆಯಲ್ಲಿ ಅವಸಾನ
- Log in or register to post comments