ಕೊಡಿಯಾಲ ತೇರು (ಮಂಗಳೂರು ರಥೋತ್ಸವ)
ಮಂಗಳೂರಿನ ಸುಪ್ರಸಿದ್ಧ ವಾರ್ಷಿಕ ಉತ್ಸವ ಕೊಡಿಯಾಲ ತೇರು ಅಥವಾ ಮಂಗಳೂರು ರಥೋತ್ಸವ. ಇದು ಗೌಡಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು (ಕೊಂಕಣಿಗರು) ವರುಷವಿಡೀ ನಿರೀಕ್ಷಿಸುವ ಸಂಭ್ರಮದ ಆಚರಣೆ.
ಇತ್ತೀಚೆಗೆ, ೧ ಫೆಬ್ರವರಿ ೨೦೨೦ರಂದು ಜರಗಿದ ಮಂಗಳೂರು ರಥೋತ್ಸವ ಕೊಂಕಣಿಗರ ಭಾವಭಕ್ತಿ ತುಂಬಿದ ಭಾಗವಹಿಸುವಿಕೆಗೆ ಮಗದೊಮ್ಮೆ ಸಾಕ್ಷಿಯಾಯಿತು. ಶತಮಾನಗಳ ಮುಂಚೆ ತಮ್ಮ ಮೂಲನೆಲೆ ತೊರೆದು ದಕ್ಷಿಣಕ್ಕೆ ಸಾಗಿ ಬಂದ ಈ ಸಮುದಾಯದವರು ಮಂಗಳೂರು ಸಹಿತ ಪಶ್ಚಿಮ ಕರಾವಳಿಯ ಹಲವಾರು ಊರುಗಳಲ್ಲಿ ನೆಲೆಯೂರಿದ್ದಾರೆ. ವ್ಯಾಪಾರ ವಹಿವಾಟಿನಲ್ಲಿ ಎಲ್ಲ ಊರುಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ.
- Read more about ಕೊಡಿಯಾಲ ತೇರು (ಮಂಗಳೂರು ರಥೋತ್ಸವ)
- Log in or register to post comments