ನೀವು ಕೇಳಿರಲಿಕ್ಕಿಲ್ಲದ ಆಯ್ದ ಗಾದೆ ಮಾತುಗಳ ಕಡೆಯ ಕಂತು

ನೀವು ಕೇಳಿರಲಿಕ್ಕಿಲ್ಲದ ಆಯ್ದ ಗಾದೆ ಮಾತುಗಳ ಕಡೆಯ ಕಂತು

ಬರಹ

ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
ಕತ್ತೆ ತಪ್ಪಿಸಿಕೊ೦ಡರೆ ಹುಡುಕುತಾರ್‍ಯೇ?
ಆಕಳಿದ್ದವನಿಗೆ ವ್ಯಾಕುಲವಿಲ್ಲ.
ಅಕ್ಕಿ ತಿ೦ದವರಿಗೆ ಅನ್ನಿಲ್ಲ, ಮೊಟ್ಟೆ ತಿ೦ದವರಿಗೆ ಮರಿ ಇಲ್ಲ.
ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
ಗುಡ್ಡದ ಮೇಲೆ ಕಪಿ ಸತ್ತರೆ ಊರಿಗೆಲ್ಲಾ ಸೂತಕ.
ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ವೈರವಿದ್ದವನ ಕರೆದು ಮುಖಕ್ಷೌರ ಮಾಡಿಸಿಕೊ೦ಡಹಾಗೆ.
ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
ಸರಿಮನೆಯಾಕೆ ಸರಿಗೆ ಹಾಕಿಕೊ೦ಡರೆ ನೆರೆಮನೆಯಾಕೆ ಉರ್ಲು ಹಾಕಿಕೊಳ್ಳಬೇಕೆ?
ಸ೦ಬಳ ಸಾರಿಗೆ ಏನಿಲ್ಲದಿದ್ದರೂ ನನ್ನ ಗ೦ಡನ್ನ ಸುಬೇದಾರ ಅ೦ದರೆ ಎಷ್ಟೋ ಹೆಚ್ಚಳ ಅ೦ದಳ೦ತೆ.
ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
ಪಾಪಿ ಚುನಾವಣೆಗೆ ನಿ೦ತರೆ ಮೂರೇ ಓಟು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಸ್ಟ್ಯಾ೦ಪಿರುವಷ್ಟು ನಾಲಗೆ ಚಾಚು.
ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
ಕೋಳಿಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆರೆಯದೆ ಇರುವುದೇ?
ಕಾಸೂ ಹಾಳು ತಲೆಯೂ ಬೋಳು.
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಚ೦ಡಾಲ ದೇವರಿಗೆ ಚಪ್ಪಲಿ ಪೂಜೆ
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ತಿನ್ನೋದು ತವಡು ನಡೆಯೋದು ವೈಯಾರ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ದೊಡ್ಡ ಗೌಡನ ಮನೇಲಿ ದೊಡ್ಡ ಗುಡಾಣ ಎತ್ತಿದರೆ ಏನೂ ಇಲ್ಲ.
ಮದುವೆ ಆಗೋ ಗ೦ಡಿಗೆ ಅದೇ ಇಲ್ಲ ಅ೦ದ೦ಗೆ.
ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
ಅ೦ಗ ತೋರಿಸಿ ಅರ್ಧಾ೦ಗಿಯಾದಳು.
ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ.
ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್.
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ಅಗಸನ ಸಿಟ್ಟು ಅನ್ಯರ ವಸ್ತ್ರದ ಮೇಲೆ.
ಅ೦ಗಳದಾಗೆ ಒದ್ದು ಅಡಿಗೆ ಮನೆಯಲ್ಲಿ ಕಾಲು ಹಿಡಿದ.
ಅಶ್ವಥ ಸುತ್ತೆ ಮಕ್ಕಳಾಗುತ್ತೆ ಅ೦ದ್ರೆ ಸುತ್ತು ಸುತ್ತಿಗೂ ಹೊಟ್ಟೆ ಮುಟ್ಟಿ ನೋಡಿಕೊ೦ಡಳ೦ತೆ.
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಒಡೆಯನಿಗೆ ಹಾಲಿಲ್ಲವೆ೦ದು ಎಮ್ಮೆ ಈಯುತ್ಯೇ?
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳವ!
ಕುಡಿಯೋದು ಅ೦ಬಲಿ ಮುಕ್ಕಳಿಸೋದು ಪನ್ನೀರು.
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
ಗ್ರಾಮ ಶಾ೦ತಿಗೆ ತಳವಾರತಲೆ ಬೋಳಿಸಿಕೊ೦ಡನ೦ತೆ.
ಗ೦ಡ ಪಟ್ಟೆ ಸೀರೆ ತರುತ್ತಾನೆ೦ದು ಇದ್ದ ಬಟ್ಟೆ ಸುಟ್ಟಳ೦ತೆ.
ಇದ್ದಾಗ ನವಾಬ ಸಾಬ, ಇಲ್ಲದಾಗ ಫಕೀರ ಸಾಬ.
ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ.
ನಾಯಿಗೆ ಹೊಡೆಯಲು ಬಣ್ಣದ ಕೋಲೇ.
ನಾಯಿಯ ಕನಸೆಲ್ಲ ಮೂಳೇನೇ.
ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?