ಚರಕ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

ಚರಕ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

ಅಭಿವೃದ್ಧಿ ವಿಷಯಗಳ ಬಗ್ಗೆ ಬರೆಯುವ ಪತ್ರಕರ್ತರನ್ನು ಗೌರವಿಸುವ ಸಲುವಾಗಿ ಬೆಂಗಳೂರಿನ ಕಮ್ಯುನಿಕೇಷನ್ ಫಾರ್ ಡೆವಲಪ್ ಮೆಂಟ್ ಅಂಡ್ ಲರ್ನಿಂಗ್ ಸಂಸ್ಥೆಯು ಪ್ರತಿ ವರ್ಷ ಚರಕ ಪ್ರಶಸ್ತಿಗಳನ್ನು ನೀಡುತ್ತಿದೆ. ಪ್ರಶಸ್ತಿಗೆ ಇದು ಆರನೇ ವರ್ಷ. ಈ ವರ್ಷದ ಪ್ರಶಸ್ತಿಗಳನ್ನು ದಿನಾಂಕ ೦೧.೦೭.೨೦೦೯ ರಂದು ಪ್ರದಾನ ಮಾಡಲಾಗುತ್ತಿದೆ. ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಸಂಜೆ ೫ ಗಂಟೆಗೆ ಕಾರ್ಯಕ್ರಮ. ಅನುಕ್ರಮವಾಗಿ ಡಾ.ಪೂರ್ಣಿಮಾ, ಮಲ್ಲಿಕಾರ್ಜುನ ಹೊಸಪಾಳ್ಯ, ಕಟ್ಟೆ ಗುರುರಾಜ್ ಮತ್ತು ಮಹೇಶ್ ಭಗೀರಥ ಅವರು ಈ ಸಲದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜುಲೈ ೧ ವಿಶ್ವ ಪತ್ರಿಕೋದ್ಯಮ ದಿನವೂ ಹೌದು.