ಮುಡಿ ಕೊಡುತ್ತಾರಾ....

ಮುಡಿ ಕೊಡುತ್ತಾರಾ....

ನಟರಾಜ್ ಕನ್ನಡಿಗರನ್ನು ಒಂದು ಗೂಡಿಸಿ, ಚಹಾ, ಕಾಫಿ ಮತ್ತು ಆಟಕ್ಕೆ ಕ್ಷಮಿಸಿ.... ಊಟಕ್ಕೆ ಪ್ರತಿ ಶುಕ್ರವಾರ ಕರೆದುಕೊಂಡು ಹೋಗುತ್ತಾರೆ. ಆಟಕ್ಕೂ ಕರೆಯಬಹುದಿತ್ತು ಇವರಿಗೆ ಗೊತ್ತು ಈ ಸಂಸಾರಸ್ತರು ಆಟಕ್ಕೆ ಎಂದು ಬರುವದಿಲ್ಲ, ಅಪ್ಪಿ ತಪ್ಪಿ ಬಂದರು ಇವರ ಧಡೂತಿ ಹೊಟ್ಟೆ ಇವರನ್ನು ಆಡಲು ಬಿಡುವದಿಲ್ಲ . ಇವರೆನಿದ್ದರು ತಿನ್ನಲು ಕುಡಿಯಲು ಯೋಗ್ಯ ಎಂದು.

140 ಜನ ಕೆಲಸ ಮಾಡುವ ಕಂಪನಿಯಲ್ಲಿ ಸುಮಾರು 20 ಜನ ಮಾತ್ರ ಕನ್ನಡಿಗರು. ಹೋಟೆಲ್ ಹೋಗುವ ಸಮಯದಲ್ಲಿ ನಟರಾಜ್ ಮಾತು ಶುರು ಹಚ್ಚಿ ಕೊಂಡರು. ನಾನು ದಿನ ಮುಂಜಾನೆ ಸುಪ್ರಭಾತ ಕೇಳುತ್ತೇನೋ ಇಲ್ಲವೋ, ಆದರೆ ದಿನ ಮುಂಜಾನೆ "ನಲ್ಲ ಇರಕ", "ಸಾಪಟಿಯ" ಎಂಬ ಶಬ್ದಗಳು ಘಂಟಾಘೋಷವಾಗಿ ನನ್ನ ಕಿವಿಗೆ ಬಂದು ಒರಗುತ್ತವೆ. ಅದ್ಯಾವ ಜನ್ಮದ ಪಾಪದ ಫಲವೋ ನಾ ಕಾಣೆ. ನಾನು ಕೆಲವೊಂದು ಸಾರಿ ಬೆಂಗಳೂರಿನಲ್ಲೇ ಇದ್ದೆನಾ?. ಎಂಬ ಸಂದೇಹ ಬಂದಿದ್ದು ಉಂಟು. ನನ್ನ ಲೀಡರ್ ಕೂಡ ಅವರೇ. ಇದಲ್ಲದೆ ನನ್ನ ಕೈ ಕೆಳಗೆ ಕೆಲಸ ಮಾಡುವ ಸಹ ಕೆಲಸಗಾರರು ಇಬ್ಬರು ಕೂಡ ಅವರೇ. ಇದಿಷ್ಟೇ ಇದ್ದಿದ್ದರೆ ಪರವಾಗಿಲ್ಲ, ಅವರು ಏನಾದರು ಕೆಲಸದ ವಿಷಯ ಮಾತನಾಡುವ ಸಮಯದಲ್ಲಿ ಕೂಡ ತಮ್ಮದೇ ಭಾಷೆಯಲ್ಲಿ ಮಾತನಾಡಿದರೆ ಎಷ್ಟು ಕೋಪ ಬರಬೇಡ. ಆ ಸಮಯದಲ್ಲಿ ಯಾರಾದರು "ನಲ್ಲ ಇರಕ" ಎಂದರೆ ಇರಿದು ಅಲ್ಲೇ ಕೊಂದು ಬಿಡುವಷ್ಟು ಕೋಪ ಬರುತ್ತೆ.

"ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು" ಎಂಬ ಡಾ|| ರಾಜ ಹಾಡು ಕೇಳಿ ಬೆಳೆದವ ನಾನು. ಕನ್ನಡದ ಬಗ್ಗೆ ಅಪಾರ ಪ್ರೀತಿ ಎಂದ.ಆಗ ನಾವೆಲ್ಲರೂ ಅವರನ್ನು ಸಮಾಧಾನ ಮಾಡಿದೆವು.

ಜನರನ್ನು ಒಗ್ಗೂಡಿಸುವ ಒಂದು ಒಳ್ಳೆ ಕೆಲಸ ನಟರಾಜ್ ಮಾಡುತ್ತಾರೆ. ಅದಕ್ಕೆ ನಾವೆಲ್ಲರೂ ಇವರನ್ನು ಎಂ ಎಲ್ ಎ ಅನ್ನೋದು. ಈ ಸಾರಿ ಕೂಡ ಊಟಕ್ಕೆ ಬನ್ನಿ ಎಂದರು. ನಾನು ಒಲ್ಲೇ ಒಲ್ಲೇ ಎಂದೇ. ನನ್ನದು ಏನಿದ್ದರು "ವಂದೇ ಮಾತರಂ" ಎಂದು ಹೊರಟು ಹೋದರು. ಇದೇನು ವಂದೇ ಮಾತರಂ ಎಂದು ಕೇಳಿದಾಗ ತಿಳಿಯಿತು ಒಂದೇ ಮಾತು ಎಂದು ತಿಳಿಯಿತು.

ಕಡೆಗೆ ಆಯಿತು ಎಂದು ಒಪ್ಪಿಕೊಂಡ ಮೇಲೆ ಎಲ್ಲರು ಹೋಟೆಲ್ ಯಾವುದೆಂದು ತೀರ್ಮಾನ ಮಾಡಿ ಹೊರಟೆವು. ನಮ್ಮ 7 ಜನರಲ್ಲಿ ಒಬ್ಬ ಸುವೆಂದು ಆಚಾರ್ಯ ಎಂಬ ಒಬ್ಬ ಒರಿಸ್ಸಾ ಹುಡುಗ ಕೂಡ ಬಂದಿದ್ದ. ಅವನಿಗೆ ಗೊತ್ತಿದದ್ದು ಹಿಂದಿ ಮತ್ತೆ ಒರಿಸ್ಸಾ ಈಗ ಅವನು ಸ್ವಲ್ಪ ಸ್ವಲ್ಪ ಕನ್ನಡ ಕಲಿಯಲು ಶುರು ಹಚ್ಚಿಕೊಂಡಿದ್ದಾನೆ. ಅದು ಏಕೆಂದರೆ ಒಂದೆರಡು ಕನ್ನಡದ ಹುಡುಗಿಯರು ನಮ್ಮ ಕಂಪನಿಗೆ ಸೇರಿದ ಮೇಲೆ.

ಎಲ್ಲರು ಹೋಟೆಲ್ ಒಳಗೆ ಕಾಲಿಟ್ಟೆವು. ಅವನು ಮಾತ್ರ ಹುಡುಗಿಯರನ್ನು ಅತ್ತಿತ್ತ ನೋಡುತ್ತಾ ಕಾಲಿಟ್ಟ. ಅಲ್ಲಿ ಒಂದು ಹುಡುಗಿ ಪ್ಲೇಟ್ ನೋಡಿದವನೇ. ಏನೋ ತಿಳಿದವನಂತೆ "ಇಲ್ಲಿ ಮುಡಿ ಕೊಡುತ್ತಾರಾ?" ಎಂದು ಕೇಳಿದ. ನಮ್ಮೆಲ್ಲರಿಗೂ ಆಶ್ಚರ್ಯ ಆಯಿತು ಏನಿದು ಇದೇನು ತಿರುಪತಿ ನಾ ಎಂದು ಕೇಳಿದೆ. ಮತ್ತೆ ಆ ಹುಡುಗಿ ಪ್ಲೇಟ್ ತೋರಿಸಿ ಕೇಳಿದಾಗ ತಿಳಿಯಿತು ಅದು "ಕಳೆ ಪುರಿ"(ಚುರ ಮುರಿ) ಎಂದು. ನಾವೆಲ್ಲರೂ ನಕ್ಕೂ ಒಳಗೆ ಹೋದೆವು.

ಊಟಕ್ಕೆ ಆರ್ಡರ್ ಮಾಡಿದೆವು. ಊಟಕ್ಕೆ ಸಂಜೀವ್ ಬಂದಿರಲಿಲ್ಲ. ಸಂಜೀವ್ ಸುವೆಂದು ಟೀಂ ಲೀಡರ್. ಊಟ ಬಂತು. ನಾನು ಊಟಕ್ಕೆ ಮೊದಲು ಒಂದು ಗ್ಲಾಸ್ ನೀರು ಕುಡಿದೆ. ಆಗ ಸುವೆಂದು "ಲೇ ಊಟಕ್ಕೆ ಮೊದಲು ನೀರಾ" ಎಂದ . ಅದು ನೀರಾ ಅಲ್ಲ ನೀರು ಎಂದೇ. ಮತ್ತೆ ನಾನು ಅವನಿಗೆ ಊಟಕ್ಕೆ ಮೊದಲು ನೀರು ಕುಡಿದರೆ ಊಟಕ್ಕೆ ಚೆನ್ನಾಗಿ ಹೋಗುತ್ತೆ ಎಂದೇ. ಆಗ ನೋಡ ನೋಡುತ್ತಲೇ ಒಂದು ಜಗ್ ನೀರು ಕುಡಿದು ಬಿಟ್ಟ. ಲೇ ಒಂದು ಗ್ಲಾಸ್ ಅಂತ ಹೇಳಿದ್ದು ನೀನು ಒಂದು ಜಗ್ ಕುಡಿದೆಯಾ ಎಂದು ಹೇಳಿದೆ.

ಊಟದಲ್ಲಿ ನುಗ್ಗೆ ಕಾಯಿ ಸಾರು ಮಾಡಿದ್ದರು. ಆಗ ಸುವೆಂದು ನನಗೆ ನಗ್ಗೆ ಕಾಯಿ ಬೇಡ ಎಂದ. ಸದ್ಯ ಸೀಗೆ ಕಾಯಿ ಅನ್ನಲಿಲ್ಲ. ಊಟ ಮುಗಿದ ಮೇಲೆ ಎಲ್ಲರಿಗೆ ಏಳಲು ಬರಲಾರದಷ್ಟು ಹೊಟ್ಟೆ ತುಂಬಿತ್ತು. ಸುವೆಂದು ಹೊಟ್ಟೆ ಮಾತ್ರ ನೀರಿನಿಂದ ಕೊಳ್ಳ ಕೊಳ್ಳ ಎನ್ನುತಿತ್ತು. ಆಗ ಸರ್ವರ್ ಬಂದು "ಊಟ ಫಸ್ಟ್ ಟೈಮ್ ಮಾಡುತ್ತ ಇರುವದ ಎಂದು ಕೇಳಿದ". ಅದಕ್ಕೆ ನಮ್ಮ ನಟರಾಜ "ಇಲ್ಲಿ ಮೊದಲ ಬಾರಿ" ಎಂದ. ಆಗ ಸುವೆಂದು ಮಾತ್ರ ತುಂಬಾ ಅವಸರ ಮಾಡುತಿದ್ದ. ಏಕೆಂದರೆ ಅವನಿಗೆ ಒಂದು ಅರ್ಜೆಂಟ್ ಕೆಲಸ ಹೇಳಿದ್ದರು ಸಂಜೀವ್. ನಾವು ಇಂತಹ ಊಟಕ್ಕೆ ಸಂಜೀವನನ್ನು ಕರೆದು ಕೊಂಡು ಬಂದಿದ್ದರೆ ನಿನಗೆ ಕೆಲಸ ಮಾಡದಿದ್ದರೂ ನಡೆಯುತ್ತಿತ್ತು ಎಂದು ಹಾಸ್ಯ ಮಾಡುತ್ತ ಹೋಟೆಲ್ ನಿಂದ ಹೊರನಡೆದೆವು.

ಸುವೆಂದು ಅರ್ಧ ಮರ್ಧ ಕನ್ನಡದ ಜೊತೆಗೆ ಊಟ ಕೂಡ ತುಂಬಾ ಚೆನ್ನಾಗಿತ್ತು,

Rating
No votes yet

Comments