ಮಲೆನಾಡಿನ factಗಳು... ಭಾಗ-1

ಮಲೆನಾಡಿನ factಗಳು... ಭಾಗ-1

ಮಲೆನಾಡಿನ ಕೆಲವು ವಸ್ತುಸ್ಥಿತಿಗಳನ್ನು ಹಾಸ್ಯಭರಿತ ಧಾಟಿಯಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇನೆ. ನಿಮಗೆ ಇಷ್ಟವಾದರೆ ಸರಿ, ಇಲ್ಲದಿದ್ದರೆ ನಿಮ್ಮ ಸಮಯ ವ್ಯರ್ಥ ಮಾಡಿದ್ದಕ್ಕೆ ಕ್ಷಮೆಯಿರಲಿ,

1. ಭಟ್ರ ಮನೆ ಕೊಟ್ಟಿಗೆಯಲ್ಲಿ ನೇತು ಹಾಕಿರೋ ಚೀಲದಲ್ಲಿ ಕೋಳಿ ಕೂಗ್ತಿದೆ ಅಂದ್ರೆ, ಅವತ್ತು ಭಟ್ರ ಮನೇಲಿ ಹರಕೆ ಇದೆ ಅಂತ ಅರ್ಥ!

2. ದೀಪಾವಳಿ ಬಿಟ್ಟು ಬೇರೆ ಟೈಮಲ್ಲಿ ಪಟಾಕಿ ಅಥ್ವಾ ಈಡಿನ ಸೌಂಡು ಕೇಳ್ತು ಅಂದ್ರೆ, ಯಾರೋ ಹೊಗೆ ಹಾಕಿಸ್ಕೊಂಡಿದಾರೆ ಅಂತ ಅರ್ಥ!

3. ಮನೇಲಿ ನೆಲದ ಮೇಲೆ ರಕ್ತದ ಕಲೆ ಆಗಿದೆ ಅಂದ್ರೆ, ಯಾರೋ ತೋಟದಿಂದ ಇಂಬ್ಳ ಹತ್ತಿಸ್ಕೊಂಡು ಬಂದಿದಾರೆ ಅಂತ ಅರ್ಥ!

4. ಯಾರ್ದಾದ್ರೂ ಮನೇಲಿ ಹುರುಳಿ ಸಾರು ಆಗಿದೆ ಅಂದ್ರೆ, ಹೂಟೆ ಶುರುವಾಯ್ತು ಅಂತ ಅರ್ಥ!

5. ಯಾವ್ದಾದ್ರೂ ರಸ್ತೆ ರಿಪೇರಿ ಆಗ್ತಿದೆ ಅಂದ್ರೆ, "ಎಲೆಕ್ಷನ್" ಬಂತು ಅಂತ ಅರ್ಥ!

6. ಸಿಡಿಲು ಬಂತು ಅಂದ್ರೆ, ಎರಡು ದಿನ ಫೋನು ಸತ್ತು ಹೋಯ್ತು ಅಂತ ಅರ್ಥ!

ಮುಂದುವರೆಯುವುದು...

ಧನ್ಯವಾದಗಳೊಂದಿಗೆ,
-ಪ್ರಸನ್ನ.ಎಸ್.ಪಿ

Rating
No votes yet

Comments