ಮೂಢ ಉವಾಚ - 112

ಮೂಢ ಉವಾಚ - 112

ರಾಗರಹಿತ ಮನ ದೀಪದ ಕಂಬವಾಗಿ 

ಸಂಸ್ಕಾರ ಬತ್ತಿಯನು ಭಕ್ತಿತೈಲದಿ ನೆನೆಸಿ |

ದೇವನ ನೆನೆವ ಮನ ಬತ್ತಿಯನು ಹಚ್ಚಲು

ಜ್ಞಾನಜ್ಯೋತಿ ಬೆಳಗದಿಹದೆ ಮೂಢ ||


ಸತ್ವಗುಣ ಸಂಪನ್ನ ಸ್ವರ್ಗವನೆ ಸೇರುವನು

ಇದ್ದಲ್ಲೆ ಇರುವನು ರಾಜಸಿಕ ಗುಣದವನು |

ಪಶು ಪ್ರಾಣಿ ಕೀಟವಾಗುವನು ತಾಮಸಿಕ 

ಅಟ್ಟಡುಗೆಯುಣಬೇಕು ಇದು ಸತ್ಯ ಮೂಢ ||

*********************
-ಕ.ವೆಂ.ನಾಗರಾಜ್.
Rating
No votes yet

Comments