ದೇವಾ, ನೈವೇದ್ಯ ಸಿಗದಿದ್ದರೆ ಬೇಡ ಕೋಪ!

ದೇವಾ, ನೈವೇದ್ಯ ಸಿಗದಿದ್ದರೆ ಬೇಡ ಕೋಪ!

ಲಂಚ ಪಡೆಯುವುದೂ ತಪ್ಪು ಹಾಗೂ ಲಂಚ ಕೊಡುವುದೂ ತಪ್ಪು
ಮಹಾತ್ಮ ಹಜಾರೆ ನಮ್ಮೆಲ್ಲರ ಕಣ್ಣು ತೆರೆಸಿದ್ದಾರೆ, ನೀನೂ ಒಪ್ಪು

ಪರರಿಗೆ ಅನ್ಯಾಯವಾಗದಂತೆ ಬಾಳುವುದದು ನಮ್ಮ ಕರ್ತವ್ಯ
ನಮಗೆ ಒಳ್ಳೆಯದಾಗುವಂತೆ ಸಹಕರಿಸುವುದು ನಿನ್ನ ಕರ್ತವ್ಯ

ನಮ್ಮ ಸತ್ಕರ್ಮಗಳೇ ನಮ್ಮನ್ನು ಕಾಪಾಡಬೇಕು ಎಂಬ ನಂಬಿಕೆ
ನಮ್ಮ ಕುಕರ್ಮಗಳಿಂದಲೇ ನಮಗೆ ಶಿಕ್ಷೆ ಎಂಬುವುದೂ ನಂಬಿಕೆ

ನಾವು ಏನೆಂಬುದ ನೀನು ಅರಿತಿರುವೆ ಹಾಗಾಗಿ ನಮಗಿಲ್ಲ ಭಯ
ನಮ್ಮ ಅರ್ಹತೆಗೆ ತಕ್ಕುದಾದುದೇ ದಕ್ಕುವುದು ಅದು ನಿನ್ನ ನ್ಯಾಯ

ಎಲ್ಲವೂ ನಮ್ಮ ಆಚಾರ ವಿಚಾರಗಳಿಂದಲೇ ಆಗಬೇಕು ನಿರ್ಧಾರ
ಹಾಗಾಗಿ ನಿನಗೆ ಲಂಚ ನೀಡಲಾರೆವಿನ್ನು, ಇದು ನಮ್ಮ ನಿರ್ಧಾರ

ಇನ್ನು ನಿನಗೆ ಪೂಜೆ, ನೈವೇದ್ಯ, ಕಾಣಿಕೆ, ಸಿಗದಿದ್ದರೆ ಬೇಡ ಕೋಪ
ಅಣ್ಣರ ಕಣ್ಣುಗಳಿಗೆಲ್ಲಾದರೂ ಬಿದ್ದರೆ ನಮ್ಮಿಬ್ಬರ ಗತಿ, ಅಯ್ಯೋ ಪಾಪ

ಏಕೆಂದರೆ ಲಂಚ ಪಡೆಯುವುದೂ ತಪ್ಪು, ಲಂಚ ಕೊಡುವುದೂ ತಪ್ಪು
ಮಹಾತ್ಮ ಹಜಾರೆ ನಮ್ಮೆಲ್ಲರ ಕಣ್ಣು ತೆರೆಸಿದ್ದಾರೆ, ನೀನೂ ಒಪ್ಪು!

************************

Rating
No votes yet

Comments