ಸಮಾನತೆಯ ಆಸೆ
ಕವನ
ಜಗಕೆ ಅರಿವೆಂಬ ಮಳೆಸುರಿದು
ಜನರ ಮಸ್ತಕದಿ ಜಿನುಗಲಿ
ಅಸಮಾನತೆಯ ಕಳೆ ತೆಗೆದು
ಸಮಾನತೆಯ ಬೆಳೆ ಬೆಳೆಯಲಿ ||
ಅತಿವೃಷ್ಟಿ ಯಾಗಿ ಅಂತಸ್ತು ಕರಗಿ
ನಗನಾಣ್ಯವೆಲ್ಲ ಹರಿದಂಚಿ ಹೋಗಿ
ಬರಡಾದ ಬಡವನಂಗಳದಿ
ಸಿರಿತನದ ಮೊಳಕೆ ಹೊಡೆಯಲಿ ||
ಜಾತಿಬೇದವು ನೆರೆಯಲ್ಲಿ ಮುಳುಗಿ
ಮೂಢಾಚಾರವು ನೀರಲ್ಲಿ ಕರಗಿ
ರಸಋಷಿಯ ವಿಶ್ವಮಾನವ ಕನಸು
ಇಂದಿಗಾದರು ನನಸಾಗಲಿ ||
ಆರ್. ಆರ್. ಅಶಾಪುರ್