ಸಾಮರಸ್ಯದ ಉದ್ದೇಶವನ್ನು ಹೊಂದಿರುವ ನಾಡಗೀತೆ ಸರ್ವ ಜನಾಂಗದ ಶಾಂತಿಯ ತೋಟ ಸಾಲಿಗೆ ಕತ್ತರಿ, ಎಸ್.ಎಫ್.ಐ ಖಂಡನೆ

ಸಾಮರಸ್ಯದ ಉದ್ದೇಶವನ್ನು ಹೊಂದಿರುವ ನಾಡಗೀತೆ ಸರ್ವ ಜನಾಂಗದ ಶಾಂತಿಯ ತೋಟ ಸಾಲಿಗೆ ಕತ್ತರಿ, ಎಸ್.ಎಫ್.ಐ ಖಂಡನೆ

           ಸಾಮರಸ್ಯದ ಉದ್ದೇಶವನ್ನು ಹೊಂದಿರುವ ನಾಡಗೀತೆ ಸರ್ವ ಜನಾಂಗದ ಶಾಂತಿಯ ತೋಟ ಸಾಲಿಗೆ ಕತ್ತರಿ,  ಎಸ್.ಎಫ್.ಐ ಖಂಡನೆ

ಈ ನೆಲದ ವೈಚಾರಿಕ ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕುವೆಂಪು ರವರಿಂದ ರಚಿತವಾದ, ಕನಾಟಕದ ಶಾಂತಿ ಸೌಹಾರ್ದತೆಯ ಪ್ರತೀಕವಾದ ನಾಡಗೀತೆಯಲ್ಲಿನ ಪ್ರಮುಖ ಸಾಲು, ಸರ್ವ ಜನಾಂಗದ ಶಾಂತಿಯ ತೋಟ ಎಂಬುವ ಈ ನೆಲದ ಸಂಸ್ಕೃತಿಯನ್ನು ಬಿಂಬಿಸುವ   ಸಾಲನ್ನು ಕಡಿತಗೊಳಿಸಿ ಕೆ.ವೈ ಮುದ್ದುಕೃಷ್ಣ ಸಮಿತಿಯು ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು  ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್.ಎಫ್.ಐ) ಕನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

ಕುವೆಂಪು ಅವರ ಮೂಲ ಆಶಯವೂ ಕೂಡ ಈ ಸಾಲಿನಲ್ಲಿದೆ ಎಂಬುವುದನ್ನು ಮುದ್ದುಕೃಷ್ಣ ಸಮಿತಿಯು ಮರೆತಿರುವುದು ಖೇದಕರವಾದುದು.  ನಾಡಗೀತೆಯು ವಿದ್ಯಾರ್ಥಿಗಳಲ್ಲಿ ಈ ನೆಲದ ಸಾಂಸ್ಕೃತಿಕ ಹಿರಿಮೆಯನ್ನು ಹಾಗೂ ಸಾಂವಿಧಾನಿಕ ಆಶಯವಾದ ಪ್ರಜೆಗಳಲ್ಲೆರೂ ಸಮಾನರೆನ್ನುವ ತಿಳುವಳಿಕೆಯನ್ನು ಮೂಡಿಸುವಂತಿದೆ. ಈ ಸಾಲುಗಳನ್ನು ತೆಗೆದು ಹಾಕುವಂತೆ ಮಾಡಿರುವ ಶಿಫಾರಸ್ಸನ್ನು ರಾಜ್ಯ ಸರಕಾರ ಮಾನ್ಯತೆ ನೀಡದೆ ತಿರಸ್ಕರಿಸಬೇಕು. ಯಾವುದೇ ಕಾರಣಕ್ಕೂ ಈ ಶಿಫಾರಸ್ಸನ್ನು ಅಂಗೀಕಾರಕ್ಕೆ ಮುಂದಾಗಬಾರದು. ಈ ವಿಷಯಕ್ಕೆ ರಾಜ್ಯದ ಪ್ರಗತಿಪರ ಬುದ್ದೀಜೀವಿಗಳು ಧ್ವನಿ ಎತ್ತಿ ಒಕ್ಕೊರಲಿನಿಂದ ವಿರೋದಿಬೇಕಿದೆ. ಒಂದು ವೇಳೆ ಈ ಸಾಲುಗಳನ್ನು ಕಡಿತಗೊಳಿಸಲು ಮುಂದಾದರೆ ವಿದ್ಯಾರ್ಥಿಗಳು ಸಾಹಿತಿಗಳು, ಶಿಕ್ಷಕ-ಉಪನ್ಯಾಸಕರು ರಾಜ್ಯ ಸರಕಾರದ ವಿರುದ್ಧ ತೀವ್ರತೆರನಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್.ಎಫ್.ಐ) ಕನಾಟಕ ರಾಜ್ಯ ಸಮಿತಿಯು ಒತ್ತಾಯಿಸುತ್ತದೆ.