'ರೆಡ್ ಸೆಲ್’: ಶತ್ರುವಿನಂತೆ ಯೋಚಿಸಿ!

'ರೆಡ್ ಸೆಲ್’: ಶತ್ರುವಿನಂತೆ ಯೋಚಿಸಿ!

ಒಂದು ರಾಷ್ಟ್ರ ಅಥವಾ ರಾಜ್ಯದ ಪ್ರಮುಖ ಉದ್ದೇಶ ಮತ್ತು ನಿರ್ವಹಿಸಬೇಕಾದ ಕರ್ತವ್ಯಗಳು ಹಲವಾರಿದ್ದರೂ,ತನ್ನ ರಾಷ್ಟ್ರೀಯ ಭದ್ರತೆ ಅಗ್ರಗಣ್ಯ ಆದ್ಯತೆಯ ವಲಯ. ಪ್ರತಿ ರಾಷ್ಟ್ರವೂ ಕೂಡ ತನ್ನ ಆಂತರಿಕ ಮತ್ತು ಬಾಹ್ಯಶತ್ರುಗಳಿಂದ ರಾಷ್ಟ್ರೀಯ ಹಿತಾಸಕ್ತಿಯನ್ನು ರಕ್ಷಣೆ ಮಾಡಲು ಯಾವುದೇ ಕಾರ್ಯಾಚರಣೆಗೂ ಮುಂದಾಗುತ್ತದೆ.ಚರಿತ್ರೆ ನೆನಪಿಟ್ಟುಕೊಂಡಿರುವ ಸಾಲು ಸಾಲು ಸಮರಗಳೇ ಇದಕ್ಕೆ ಸಾಕ್ಷಿ. ಒಂದು ರೀತಿಯಲ್ಲಿ ಇತಿಹಾಸವೆಂದರೆಯುದ್ಧಗಳ ಕಥೆಯೇ !

ಕಣ್ಣಿಗೆ ಕಾಣುವ ಯುದ್ಧ, ರಾಷ್ಟ್ರೀಯ ಹಿತಾಸಕ್ತಿಯನ್ನು ಮತ್ತು ವಿದೇಶಾಂಗ ನೀತಿಯ ಕೊನೆಯ ಪ್ರಯತ್ನ. ಆದರೆಯುದ್ಧ ಮಾತ್ರ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವ ಸಾಧನವಲ್ಲ. ಜನಸಾಮಾನ್ಯರ ಕಣ್ಣಿಗೆ ಕಾಣದ, ಕೆಲವೊಮ್ಮೆಅವರ ಊಹೆಗೂ ನಿಲುಕದ ರೀತಿಯಲ್ಲಿ ಕೆಲವೊಂದು ಸಂಸ್ಥೆಗಳು ರಾಷ್ಟ್ರದ ಹಿತಾಸಕ್ತಿಯಲ್ಲಿ ಎಳ್ಳಷ್ಟೂಕುಂದುಂಟಾಗದಂತೆ ಕಾರ್ಯವೆಸಗುತ್ತವೆ. ಒಂದು ರಾಷ್ಟ್ರದ ಬಲಾಬಲಗಳನ್ನು ಅದರ ಸೇನಾ ಶಕ್ತಿ ಮತ್ತುಶಸ್ತ್ರಾಗಾರದಿಂದ ಅಳೆಯುವಂತಿಲ್ಲ. ಅಂತರ್ರಾಷ್ಟ್ರೀಯ ರಾಜಕಾರಣದಲ್ಲಿ ದೇಶದ ಗುಪ್ತಚರ ವಿಭಾಗ ಪ್ರಮುಖಪಾತ್ರ ವಹಿಸುತ್ತದೆ. ಇವುಗಳ ಕಾರ್ಯವೈಕರಿಯ ಬಗೆಗೆ ಸಾಮಾನ್ಯ ಕುತೂಹಲ ಇದ್ದಿದ್ದೇ. ಪ್ರತಿಯೊಂದು ರಾಷ್ಟ್ರತನ್ನದೇ ಆದ ಗುಪ್ತಚರ ವಿಭಾಗ ಹೊಂದಿರುತ್ತದೆ. ಉದಾಹರಣೆಗೆ ಭಾರತದ ರಾ, ಅಮೆರಿಕಾದ ಸಿಐಎ, ಇಸ್ರೇಲ್ನ ಮೊಸ್ಸಾದ್, ಪಾಕಿಸ್ತಾನದ ಐ.ಎಸ್.ಐ ಹೀಗೆ ಗುಪ್ತಚರ ವಿಭಾಗಗಳು ಆಯಾ ದೇಶದ ಕಣ್ಣು ಮತ್ತು ಕಿವಿಗಳಾಗಿಕೆಲಸ ಮಾಡುತ್ತವೆ.

ಗುಪ್ತಚರ ವಿಭಾಗ ಇತ್ತೀಚಿನ ಬೆಳವಣಿಗೆಯೇನಲ್ಲ, ಚಾಣಕ್ಯ ಬಹಳ ಹಿಂದೆಯೇ ಗುಪ್ತಚಾರ ವಿಭಾಗದಪ್ರಾಮುಖ್ಯತೆಯನ್ನು ವಿವರಿಸಿದ್ದಾರೆ. ಗುಪ್ತಚಾರ ವಿಭಾಗದ ಒಂದು ಸಣ್ಣ ಲೋಪವೂ ದೇಶಕ್ಕೆ ಬಹುದೊಡ್ಡಕಂಟಕವಾಗಿ ಪರಿಣಮಿಸಬಲ್ಲದು. ಪ್ರಪಂಚದ ಯಾವುದೇ ದಿಕ್ಕಿನಿಂದ ರಾಷ್ಟ್ರೀಯ ಸಮಗ್ರತೆ ಮತ್ತು ಭದ್ರತೆಗೆಸವಾಲಾಗುವ ಪ್ರತಿ ಶತ್ರುವಿನ ಮೇಲೂ ಹದ್ದಿನ ಕಣ್ಣಿಟ್ಟು, ಇಡೀ ರಾಷ್ಟ್ರಕ್ಕೆ ಉಕ್ಕಿನ ಕವಚವಾಗಿ ರಕ್ಶಿಸುವಮಹತ್ತರ ಜವಾಬ್ದಾರಿ ಹೊತ್ತ ಅತ್ಯಂತ ಚುರುಕು ಸೈನ್ಯವೇ ಗುಪ್ತಚರ ವಿಭಾಗ. ಎಲ್ಲಾ ಸಾಂಪ್ರದಾಯಿಕಯೋಚನಾ ವಿಧಾನಗಳಿಂದ ಹೊರಬಂದು, ಪ್ರತಿ ಕ್ಷಣ ಹೊಸ ಅಪಾಯದ ಬಗೆಗೆ ಹೊಸ ರೀತಿಯಲ್ಲಿಯೋಚಿಸುವುದೇ ಗುಪ್ತಚರ ವಿಭಾಗದ ವಿಶೇಷತೆ.

11 ಸೆಪ್ಟೆಂಬರ್ 2001, ಉಗ್ರರ ದಾಳಿಯಿಂದ ಅಮೇರಿಕಾ ತತ್ತರಿಸಿದ ದಿನ. ಈ ದುರ್ಘಟನೆಯ ಬಳಿಕಅಮೆರಿಕಾದ ವಿದೇಶಾಂಗ ನೀತಿ ಮತ್ತು ವಿಶ್ವ ರಾಜಕೀಯದಲ್ಲಿ ಅನೇಕ ಬದಲಾವಣೆಗಳಾದವು. ಆದರೆ ಈ ಘಟನೆಅಮೆರಿಕಾ ಗುಪ್ತಚರ ಸಂಸ್ಥೆ ಸಿ.ಐ.ಎ ಮಹತ್ತರ ಬದಲಾವಣೆಯೊಂದಕ್ಕೆ ಸಾಕ್ಷಿಯಾಯಿತು. 9/11 ರ ಕುಖ್ಯಾತಉಗ್ರ ದಾಳಿಯ ನಂತರ ಅಮೆರಿಕಾ ನೆಲದಲ್ಲಿ ಇನ್ನಷ್ಟು ಉಗ್ರ ಚಟುವಟಿಕೆಗಳ ನಡೆಯುವ ಬಗ್ಗೆ ಗುಪ್ತಚರ ಸಂಸ್ಥೆಗೆಮಾಹಿತಿ ಸಿಕ್ಕಿತ್ತು. ಮುಂದೆ ನಡೆಯುವ ಎಲ್ಲಾ ಉಗ್ರ ಚಟುವಟಿಕೆಗಳಿಗೆ ಪೂರ್ಣ ವಿರಾಮ ಹಾಕುವ ಜವಾಬ್ದಾರಿಸಿ.ಐ.ಎ ಗಿತ್ತು. ಆಗಿನ ಸಿ.ಐ.ಎ ನಿರ್ದೇಶಕರಾಗಿದ್ದ ಜಾರ್ಜ್ ಟಿನೆಟ್ ಉನ್ನತ ಅಧಿಕಾರಿಗಳ ರಹಸ್ಯಸಭೆಯೊಂದರಲ್ಲಿ ಒಂದು ವಿಶೇಷ ತಂಡದ ರಚನೆಗೆ ಮುಂದಾಗುತ್ತಾರೆ.

ಟಿನೆಟ್ ಪ್ರಸ್ತಾಪಿಸಿದ ವಿಶೇಷ ತಂಡ, ಉಗ್ರರ ಎಲ್ಲಾ ಅನಿರೀಕ್ಷಿತ ದಾಳಿಯ ಸಾಧ್ಯತೆಗಳನ್ನು ಶತ್ರುವಿನಂತೆಯೋಚಿಸಿ, ಶತ್ರುವಿಗಿಂತ ಮೊದಲೇ ಕಾರ್ಯೋನ್ಮುಖವಾಗಬೇಕಿತ್ತು. ಈ ತಂಡ ಸಾಂಪ್ರದಾಯಿಕ ಗುಪ್ತಚರಮಾಹಿತಿ ಮತ್ತು ವಿಶ್ಲೇಷಣೆಗಿಂತ ವಿಭಿನ್ನವಾಗಿದ್ದು, ದೇಶದ ರಕ್ಷಣಾ ವ್ಯವಸ್ಥೆಯ ಹಳೆಯ ಚಿಂತನೆಗೆಪರ್ಯಾಯವಾದ ಹೊಸ ವಿಚಾರಗಳನ್ನು ನೀಡಬೇಕಾಗಿತ್ತು. ಇದಕ್ಕಾಗಿ ಹಿರಿಯ ಅಧಿಕಾರಿಗಳ ಭಯವಿಲ್ಲದೇ,ನಿರ್ಭಿಡೆಯಿಂದ ಸ್ವತಂತ್ರ ಅಭಿಪ್ರಾಯ ವ್ಯಕ್ತಪಡಿಸುವ ಕೆಲವರನ್ನು ಆಯ್ದುಕೊಳ್ಳಲಾಯಿತು. ಈ ವಿಶೇಷ ತಂಡಕ್ಕೆಟಿನೆಟ್ ನೀಡಿದ ಹೆಸರು 'ರೆಡ್ ಸೆಲ್'! ಹೀಗೆ ಸೃಷ್ಠಿಯಾದ 'ರೆಡ್ ಸೆಲ್' ಮುಂದೆ ಅಮೆರಿಕಾದ ಗುಪ್ತಚರ ಸಂಸ್ಥೆಯ ಅವಿಭಾಜ್ಯ ಅಂಗವಾಗಿ, ಇಂದಿಗೂತನ್ನ ಕಾರ್ಯ ನಿರ್ವಹಿಸುತ್ತಿದೆ. 'ರೆಡ್ ಸೆಲ್'ನ ಪ್ರಮುಖ ಉದ್ದೇಶವೇ ಶತ್ರುವಿನಂತೆ ಯೋಚಿಸುವುದು. ಶತ್ರುಗಳದೃಷ್ಠಿಯಲ್ಲಿ ತನ್ನ ರಕ್ಷಣಾ ವ್ಯವಸ್ಥೆಯ ಲೋಪ ಕಂಡುಕೊಳ್ಳುವುದು ಮತ್ತು ಶತ್ರುವಿನ ನಿರೀಕ್ಷಿತ ದಾಳಿಗೆಸನ್ನದ್ಧರಾಗಿರುವುದು. ಈ ವಿಶೇಷ ತಂಡದ ವಿಶ್ಲೇಷಣೆಗಳು, ಮಖ್ಯವಾಹಿನಿ ರಕ್ಷಣಾ ವಿಶ್ಲೇಷಣೆಗಳಿಗಿಂತ ಅಂದರೆಹಿರಿಯ ವಿಶ್ಲೇಷಕರಿಗಿಂತ ವಿಭಿನ್ನವಾಗಿತ್ತು. ಹಾಗಾಗಿ ರೆಡ್ ಸೆಲ್ ಹಿರಿಯ ಮುಖ್ಯವಾಹಿನಿ ರಕ್ಷಣಾ ವಿಶ್ಲೇಷಕರಕೆಂಗಣ್ಣಿಗೂ ಗುರಿಯಾಯಿತು.

ರೆಡ್ ಸೆಲ್ ತಂಡಕ್ಕೆ ಸದಸ್ಯರನ್ನು ನೇರವಾಗಿ ಸಿ.ಐ.ಎ ನಿರ್ದೇಶಕರೇ ಮಾಡುತ್ತಾರೆ. ಅತ್ಯಂತ ಅರ್ಹ ಮತ್ತುಪ್ರತಿಭಾವಂತರ ಮಧ್ಯೆ, ನಿರ್ಭೀತ ವಿಶ್ಲೇಷಣೆ, ಶ್ರೇಷ್ಠ ಬರವಣಿಗೆ, ಮತ್ತು ಜಾಗತಿಕ ರಾಜಕೀಯದ ಬಗೆಗಿನಆಳವಾದ ಅಧ್ಯಯನ ಆಯ್ಕೆಗೆ ಮಾನದಂಡಗಳಾಗುತ್ತವೆ. ಈ ವಿಶ್ಲೇಷಕರು ರೆಡ್ ಸೆಲ್ ನಲ್ಲಿ ಎರಡು ವರ್ಷಕ್ಕಿಂತಹೆಚ್ಚು ಕಾಲ ಕಾರ್ಯ ನಿರ್ವಹಿಸುವಂತಿಲ್ಲ. ಹೀಗೆ ರೆಡ್ ಸೆಲ್ ಶತ್ರುಗಳಿಗೆ ಸಿಂಹಸ್ವಪ್ನವಾಗಿ, ನಿರಂತರ ಹೊಸಆಲೋಚನೆಗಳೊಂದಿಗೆ ಗುಪ್ತಚರ ವಿಭಾಗದಲ್ಲೇ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತ್ತು. ಪ್ರಸ್ತುತ ಇತರದೇಶಗಳು ಕೂಡ ಈ ಮಾದರಿಯತ್ತ ಒಲವು ತೋರಿಸುತ್ತಿರುವುದು ಗಮನಾರ್ಹ.

ಗುಪ್ತಚರ ವಿಭಾಗ ತನ್ನದೇ ಶೈಲಿಯ ಕಾರ್ಯಾಚರಣೆ, ಯಾರ ಪ್ರಭಾವಕ್ಕೂ ಒಳಪಡದೆ ಕೈಗೊಳ್ಳುವ ಸ್ವತಂತ್ರನಿರ್ಧಾರಗಳು ಕೆಲವೊಂದು ಟೀಕೆಗಳಿಗೆ ಒಳಗಾದರೂ, ಗುಪ್ತಚರ ದಳದ ಅನುಪಸ್ಥಿತಿಯಲ್ಲಿ ದೇಶದ ರಕ್ಷಣೆಯನ್ನುಊಹಿಸಲೂ ಅಸಾಧ್ಯ. ಭಾರತದ ದೃಷ್ಠಿಯಿಂದಲೂ ಈ ಮಾದರಿ ಹೊಸತೇನಲ್ಲ. ಬಹಳ ಹಿಂದೆಯೇ ಚಾಣಕ್ಯ ಒಬ್ಬರಾಜನಿಗಿರಬೇಕಾದ ಗುಣಗಳ ಬಗ್ಗೆ ವಿವರಿಸುತ್ತಾ, ರಾಜ ಕುತಂತ್ರದಲ್ಲಿ ನರಿಯಂತೆ,ಬುದ್ಧಿವಂತಿಕೆಯಲ್ಲಿ ಕಾಗೆಹಾಗೂ ಧೈರ್ಯದಲ್ಲಿ ಸಿಂಹದಂತಿರಬೇಕು ಎಂದಿದ್ದಾನೆ. ಇಂದಿನ ರಾಜನೀತಿಗೂ ಇದು ಸ್ಪಷ್ಟವಾಗಿಅನ್ವಯಿಸುತ್ತದೆ. ಸಾಮಾನ್ಯರ ಊಹೆಗೆ ನಿಲುಕದ ರೀತಿಯಲ್ಲಿ ದೇಶ ಪ್ರತಿ ಕ್ಷಣವೂ ನೂರಾರು ಗಂಡಾಂತರಗಳನ್ನು ಎದುರಿಸುತ್ತಿದೆ.ಗಡಿ ಕಾಯುವ ಯೋಧರಿಂದ ಹಿಡಿದು ಶತ್ರುಗಳನ್ನೇ ಕಾಯುವ ಗುಪ್ತಚರ ವಿಭಾಗದವರೆಗೆ ಯಾರೇ ಒಂದು ಕ್ಷಣಮೈಮರೆತರೂ ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಗಳಿಗೆ ಮಾರಣಾಂತಿಕ ಹೊಡೆತ ಖಂಡಿತ. ರಾಷ್ಟ್ರೀಯ ಭಧ್ರತೆಗೆ ತೊಡಕಾಗುವ ಶತ್ರುಗಳನ್ನು ನಿವಾರಿಸಲು, ಶತ್ರುವಿನಂತೆ ಯೋಚಿಸಿ, ಅವರಿಗಿಂತ ಮೊದಲೇ ಕಾರ್ಯ ಪ್ರವೃತ್ತವಾಗುವಮಿಂಚಿನ ವೇಗದ ಸೈನ್ಯದ ಅವಶ್ಯಕತೆ ಬಹಳಷ್ಟಿದೆ. (ಈ ಲೇಖನ 10 ನವಂಬರ್ 2015 ರ ಹೊಸ ದಿಗಂತ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ).

Comments