IT ಗೆ ಬಂತು ಆಪತ್ತು ! ?

IT ಗೆ ಬಂತು ಆಪತ್ತು ! ?

ಹಿಂದೊಮ್ಮೆ (ಅಂದರೆ ಕೇವಲ ಏಳು ವರ್ಷಗಳ ಹಿಂದೆ!) ಬೆಂಗಳೂರಿನ ಐಟಿ ಹುಡುಗರ ಎದೆ ಒಮ್ಮೆ ಭಯದಿಂದ ಕಂಪಿಸಿತ್ತು. ಈಗ ಮತ್ತೆ ಆ ಕಂಪನ ಆರಂಭವಾಗಿದೆ. ಅಷ್ಟೇನೂ ಜೀವನಾನುಭವ ಇಲ್ಲದ (ಮುಖ್ಯವಾಗಿ ವಯಸ್ಸಿನ ಕಾರಣದಿಂದಾಗಿ), ಕೇವಲ ಒಳ್ಳೆಯ ದಿನಗಳನ್ನೆ ನೋಡುತ್ತ ಬಂದವರಿಗೆ ಈಗಿನ ಸದ್ಯದ ಸ್ಥಿತಿಯಲ್ಲಿ ಪ್ರಳಯದ ಭಾವನೆಗಳು ಸಹಜ. ಆದರೆ, ಈ ಶತಮಾನ ವಯಸ್ಸಿನ ಆಧುನಿಕ ಅರ್ಥವ್ಯವಸ್ಥೆಯಲ್ಲಿ ಲೇಯಾಫ್, ಹೈರಿಂಗ್ freeze, ನಿರುದ್ಯೋಗ, ಮತ್ತೆ ರಾಕೆಟ್ ವೇಗದಲ್ಲಿ ಮುನ್ನುಗ್ಗುವಿಕೆ, ಇವೆಲ್ಲ ಇದ್ದದ್ದೆ. ಈ ಪ್ರಳಯವಲ್ಲದ, ಆದರೆ ನಿರಾಶಾದಾಯಕ ದಿನಗಳಲ್ಲಿ ನಮ್ಮ ಮನಸ್ಥಿತಿ ಹೇಗಿರುತ್ತದೆ ಎನ್ನುವುದು ಬರಲಿರುವ ದಿನಗಳನ್ನು ನಿರ್ದೇಶಿಸುತ್ತದೆ.

2002 ರಲ್ಲಿ ಕೇವಲ 2400 ಜನ ಉದ್ಯೋಗಿಗಳನ್ನು ಹೊಂದಿದ್ದ ನಷ್ಟದಲ್ಲಿದ್ದ ಉದ್ದಿಮೆ NGEF ಅನ್ನು ಮುಚ್ಚುವಷ್ಟರಲ್ಲಿ ಕರ್ನಾಟಕ ಸರ್ಕಾರಕ್ಕೆ ಸಾಕಾಗಿ ಹೋಗಿತ್ತು. ಆದರೆ ಈಗ 2,80,000 ಉದ್ಯೊಗಿಗಳನ್ನು ಹೊಂದಿರುವ ಭಾರತದ ಮೂರು ಅತಿದೊಡ್ಡ ಐಟಿ ಕಂಪನಿಗಳು ತಮ್ಮಲ್ಲಿ ಬೆಂಚ್ ಮೇಲೆ ಇರುವವರನ್ನು ಉಳಿತಾಯದ ಕಾರಣ ಕೊಟ್ಟು ಲೇಯಾಫ್ ಮಾಡಿದರೆ ಸಾಕು NGEF ನ ಒಟ್ಟು ಉದ್ಯೋಗಿಗಳ ಇಪ್ಪತ್ತರಷ್ಟು ಜನ ಮನೆಗೆ ಹೋಗಬೇಕಾಗುತ್ತದೆ. ಇನ್ನು ಎಲ್ಲರೂ ಅದೆ ಮಾಡಿದರೆ ಲಕ್ಷಾಂತರ ಜನ ಆಗಿಬಿಡುತ್ತಾರೆ. NGEF ಉದ್ಯೋಗಿಗಳ ಪರವಾಗಿ ಪ್ರತಿಭಟನೆಗಳಾದವು. ಅಸೆಂಬ್ಲಿಯಲ್ಲಿ ವಿರೋಧ, ಗದ್ದಲಗಳೆಲ್ಲ ದಾಖಲಾದವು. ಆದರೆ ಐಟಿ ಹುಡುಗರ ಪರವಾಗಿ ಅಂತಹುದೇನೂ ಆಗುವುದಿಲ್ಲ. ಯಾಕೆ ಎನ್ನುವುದಕ್ಕೆ ಅನೇಕ ಕಾರಣಗಳಿವೆ.

ನನ್ನ ಈ ವಾರದ ಅಂಕಣ ಲೇಖನ, ಬೆಂಗಳೂರಿನ ರಿಯಲ್ ಎಸ್ಟೇಟ್, ಭಾರತದ ಐಟಿ ಇಂಡಸ್ಟ್ರಿಯ ಏಳುಬೀಳುಗಳು, ಆಗಿಹೋದ ಇತಿಹಾಸ, ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಆಗುತ್ತಲೆ ಇರುವ ಏರಿಳಿತಗಳು, corrections, ಇತ್ಯಾದಿಗಳ ಕುರಿತು ಇದೆ. ಪೂರ್ಣ ಲೇಖನ ಇಲ್ಲಿದೆ:

http://amerikadimdaravi.blogspot.com/2008/03/blog-post_20.html

ವಿಡಿಯೊ ಪ್ರಸ್ತುತಿ ಭಾಗ - 1

ವಿಡಿಯೊ ಪ್ರಸ್ತುತಿ ಭಾಗ - 2
Rating
No votes yet

Comments