ಕದ್ರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ
ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.”
೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆಗೆ) ಜರಗಿತು. ಪ್ರತಿ ವರುಷದಂತೆ ಈ ವರುಷವೂ ಹೂಗಳಿಂದ ರಚಿಸಿದ ವಿಶೇಷ ಕಲಾಕೃತಿಗಳು ಜನಾಕರ್ಷಣೆಯ ಕೇಂದ್ರಗಳಾಗಿದ್ದವು. ಕೇಸರಿ ಸೇವಂತಿಗೆ ಹೂಗಳಿಂದ ಸ್ವಾಮಿ ವಿವೇಕಾನಂದರ ಮೂರ್ತಿ, ಬಿಳಿ ಸೇವಂತಿಗೆ ಹೂಗಳಿಂದ ಹಾರುವ ಪಾರಿವಾಳದ ಕಲಾಕೃತಿ ಮತ್ತು ಕೆಂಪು ಗುಲಾಬಿಗಳಿಂದ ಐಸ್ಕ್ರೀಮ್ ಕೋನ್ ರಚಿಸಿ ಪ್ರದರ್ಶನಕ್ಕೆ ಇಡಲಾಗಿತ್ತು. ಇವುಗಳೊಂದಿಗೆ ಸೆಲ್ಫೀ ತೆಗೆಯುವುದೆಂದರೆ ಹಲವರಿಗೆ ಖುಷಿಯೋ ಖುಷಿ.
- Read more about ಕದ್ರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ
- Log in or register to post comments