ಬಹು ಉಪಯೋಗಿ ರೋಸ್ ಮೇರಿ ಸಸ್ಯ

ರೋಸ್ ಮೇರಿ ಸಸ್ಯದ ಹೆಸರನ್ನು ಬಹಳಷ್ಟು ಮಂದಿ ಕೇಳಿಯೇ ಇರುತ್ತೀರಿ. ಇದನ್ನು ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಬಹಳಷ್ಟು ಮಂದಿ ಇದರ ಎಣ್ಣೆ ಹಾಗೂ ಹುಡಿಯನ್ನು ನೋಡಿರಲೂ ಬಹುದು. ಆದರೆ ಗಿಡವನ್ನು, ಹೂವನ್ನು ನೋಡಿರುವವರು ಕಮ್ಮಿ. ರೋಸ್ ಮೇರಿ ಗಿಡದ ಬಗ್ಗೆ ಹಾಗೂ ಅದರ ಉಪಯೋಗಗಳ ಬಗ್ಗೆ ಸ್ವಲ್ಪ ಮಾಹಿತಿ ಪಡೆಯೋಣ.

Image

ಸರ್ವಜ್ಞನ ದೃಷ್ಟಿಯಲ್ಲಿ ಸಜ್ಜನ - ದುರ್ಜನ

ಮಾನವ ಜನ್ಮ ಬಹಳ ದೊಡ್ಡದು. ನಮ್ಮ ಹಿಂದಿನ ಜನ್ಮದ ಪಾಪ ಪುಣ್ಯಗಳಿಗನುಸಾರವಾಗಿ, ಈ ಜನ್ಮವೆತ್ತಿದವರು ನಾವುಗಳು. ನಮ್ಮ ಗುಣಾವಗುಣಗಳಿಗೂ, ನಾವೆಸಗಿದ ಕಾರ್ಯಗಳೇ ಕಾರಣ. ವಿವೇಕಿಗಳಾದವರು, ಜ್ಞಾನವಂತರು, ಉತ್ತಮರು, ವಿದ್ಯಾವಂತರು ತಮ್ಮ ತಮ್ಮ ಗುಣದೋಷಗಳನ್ನು ಅರಿತು, ಇನ್ನೂ ಒಳ್ಳೆಯವರಾಗಲು ಪ್ರಯತ್ನಿಸಬೇಕು. *ಸಜ್ಜನರ ಸಂಗವದು ಹೆಜ್ಜೇನು ಸವಿದಂತೆ* ಅವರ ಸಹವಾಸವು ನಮ್ಮಲ್ಲಿ ಪರಿವರ್ತನೆಯನ್ನು ಮಾಡಬಹುದು. ಸತ್ಸಂಗದಿಂದ ನಾವು ಪರಿಶುದ್ಧ ಬದುಕನ್ನು ಕಟ್ಟಿಕೊಳ್ಳಬಹುದು.

ಸತ್ಯರಾ ನುಡಿ ತೀರ್ಥ ನಿತ್ತರಾ ನಡೆ ತೀರ್ಥ

Image

ಪಿಂಚ್ ಆಫ್ ಪ್ರಪಂಚ

ಪುಸ್ತಕದ ಲೇಖಕ/ಕವಿಯ ಹೆಸರು
ರಂಗಸ್ವಾಮಿ ಮೂಕನಹಳ್ಳಿ
ಪ್ರಕಾಶಕರು
ಅಯೋಧ್ಯಾ, ಗಿರಿನಗರ, ಬೆಂಗಳೂರು
ಪುಸ್ತಕದ ಬೆಲೆ
ರೂ.೧೨೦.೦೦. ಮುದ್ರಣ: ೨೦೨೦

ಪಿಂಚ್ ಆಫ್ ಪ್ರಪಂಚ ಪುಸ್ತಕವು ರಂಗಸ್ವಾಮಿ ಮೂಕನಹಳ್ಳಿ ಇವರ ಒಂಬತ್ತನೇ ಪ್ರಕಟಿತ ಪುಸ್ತಕ. ತುಮಕೂರು ಜಿಲ್ಲೆಯ ಸಿರಾದಲ್ಲಿ ಇವರ ಜನನ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಿರಾ ಮತ್ತು ಬೆಂಗಳೂರಿನಲ್ಲಿ. ಇಪ್ಪತ್ತಮೂರನೆಯ ವಯಸ್ಸಿಗೆ ದುಬಾಯಿ ಪ್ರಯಾಣ. ನಂತರ ಕೈಬೀಸಿ ಕರೆದದ್ದು ಬಾರ್ಸಿಲೋನಾ. ಇಂಗ್ಲೆಂಡ್ ನ ಇನ್ಸ್ಟಿಟ್ಯೂಟ್ ಆಫ್ ಇಂಟರ್ನಲ್ ಆಡಿಟರ್ಸ್ ಸಂಸ್ಥೆಯ ಮೂಲಕ ಸರ್ಟಿಫೈಡ್ ಇಂಟರ್ನಲ್ ಆಡಿಟರ್ ಪದವಿ. ಇದುವರೆಗೆ ಅರವತ್ತು ದೇಶಗಳ ಪ್ರಯಾಣ, ಪ್ರವಾಸ. ಆ ದೇಶಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ನಿರಂತರ ಲೇಖನ ಕೃಷಿ ಮಾಡಿ ಇದುವರೆಗೆ ಪ್ರಕಟಿಸಿರುವ ಪುಸ್ತಕಗಳು ಎಂಟು. 

ನಮ್ಮ ಹೆಮ್ಮೆಯ ಭಾರತ (ಭಾಗ 29 - 30)

೨೯.ಜಗತ್ತಿನ ಅಪರೂಪದ ದೈತ್ಯ ಪ್ರಾಣಿ ಏಷ್ಯಾದ ಆನೆ
ಅತ್ಯಧಿಕ ಸಂಖ್ಯೆಯ ಏಷ್ಯಾದ ಆನೆಗಳು ಭಾರತದಲ್ಲಿವೆ. ಗಾತ್ರದಲ್ಲಿ ಇವು ಆಫ್ರಿಕಾದ ಆನೆಗಳಿಗಿಂತ ಸಣ್ಣವು. ಇವುಗಳ ಸೊಂಡಿಲುಗಳ ತುದಿಯಲ್ಲಿರುವ ಪುಟ್ಟ ಬೆರಳಿನಂತಹ ಭಾಗದಿಂದ ಇವು ಅತ್ಯಂತ ಸಣ್ಣ ವಸ್ತುಗಳನ್ನೂ ಎತ್ತಿಕೊಳ್ಳಬಲ್ಲವು. ಏಷ್ಯಾದ ಗಂಡಾನೆಗಳಿಗೆ ಮಾತ್ರ ಎರಡೆರಡು ದಂತಗಳಿವೆ.

ಈ ಆನೆಗಳು ದಕ್ಷಿಣ ಭಾರತದ ಮತ್ತು ಈಶಾನ್ಯ ಭಾರತದ ಕಾಡುಗಳಲ್ಲಿ ಗುಂಪುಗುಂಪಾಗಿ ವಾಸ ಮಾಡುತ್ತವೆ. ಇವು ಸಣ್ಣ ಮರಗಳನ್ನೂ ದೊಡ್ಡ ಮರಗಳ ಕೊಂಬೆಗಳನ್ನೂ ನೆಲಕ್ಕೆಳೆದು ಎಲೆಗಳನ್ನು ತಿನ್ನುತ್ತವೆ. ಕಾಡಿನಲ್ಲಿ ಇವು ಸಾಗಿದ ದಾರಿ ಇತರ ಪ್ರಾಣಿಗಳಿಗೂ ದಾರಿಯಾಗುತ್ತದೆ. "ಆನೆ ಸಾಗಿದ ದಾರಿ" ಎಂಬ ನಾಣ್ಣುಡಿಯೇ ಬಳಕೆಯಲ್ಲಿದೆ.

Image

ಬದುಕಿನಲ್ಲಿ ಬಾಗುವುದನ್ನು ಕಲಿಯಿರಿ

ತಾಮ್ರದ ಕೊಡ ಬಾವಿಯಲ್ಲಿ ಇಳಿದಾಗ ಬಾಗಿ ತನ್ನೊಳಗೆ ಪೂರ್ಣ ನೀರು ತುಂಬಿಕೊಂಡು ಮೇಲೆ ಬರುತ್ತದೆ. ಆದರೆ ಪ್ಲಾಸ್ಟಿಕ್ ಕೊಡ ಹಾಗಲ್ಲ. ನೀರು ತುಂಬಿಸಲು ಪ್ರಯಾಸ ಪಡಬೇಕು. ಬೇಗನೇ ಬಾಗುವುದೂ ಇಲ್ಲ. ಎತ್ತಿ ಕುಕ್ಕಿ ತುಂಬಿಸಬೇಕು. ತುಂಬಿದರೂ ಚೂರು ಕಡಿಮೆಯಾಗಿಯೇ ಮೇಲೆ ಬರುತ್ತದೆ. ಯಾವುದು ಬಾಗುತ್ತದೆಯೋ. ಅದು ಪೂರ್ಣ ತುಂಬಿಕೊಳ್ಳುತ್ತದೆ. ಯಾವುದು ಬಾಗುವುದಿಲ್ಲವೊ ಅದು ಅಪೂರ್ಣವೇ.

Image

ದಕ್ಷಿಣ ಭಾರತದ ಗಾಂಧಿ- ಕಾರ್ನಾಡ್ ಸದಾಶಿವ ರಾವ್

ಮಂಗಳೂರಿನ ಹೃದಯಭಾಗದಲ್ಲಿ ಒಂದು ರಸ್ತೆ ಇದೆ. ಅದನ್ನು ಎಲ್ಲರೂ ಕೆ.ಎಸ್. ಆರ್. ರಸ್ತೆ  ಅಥವಾ ಕೆ.ಎಸ್. ರಾವ್ ರಸ್ತೆ ಎಂದು ಕರೆಯುತ್ತಾರೆ. ಅದರ ವಿಸ್ತರಣಾ ರೂಪ ಹಲವರಿಗೆ ಮರೆತೇ ಹೋಗಿದೆ ಎಂದು ಕಾಣುತ್ತದೆ. ಮಹಾತ್ಮಾ ಗಾಂಧಿ ರಸ್ತೆ ಎಂಜಿ ರಸ್ತೆ ಆದಂತೆ ಮುಂದೊಂದು ದಿನ ಅಪ್ರತಿಮ ಸ್ವಾತಂತ್ರ್ಯ ಯೋಧ, ಸಮಾಜ ಸೇವಕ ಕಾರ್ನಾಡು ಸದಾಶಿವ ರಾವ್ ಅವರನ್ನು ನಮ್ಮ ಮುಂದಿನ ಪೀಳಿಗೆ ಕೇವಲ ಕೆ.ಎಸ್. ಆರ್ ಎಂದು ಗುರುತಿಸತೊಡಗುತ್ತದೆ ಎಂಬುದೇ ಬೇಸರದ ಸಂಗತಿ ಅಲ್ಲವೇ? ನಮ್ಮ ಸರಕಾರಗಳಿಗೂ ಯಾವುದಾದರೂ ರಸ್ತೆಗೆ, ವೃತ್ತಕ್ಕೆ ಅಥವಾ ಚೌಕಕ್ಕೆ ಮಹನೀಯರ ಹೆಸರು ಇಡಲಷ್ಟೇ ಆತುರ. ಆ ಮಹನೀಯರ ಬಗ್ಗೆ, ಅವರು ದೇಶಕ್ಕಾಗಿ, ಸಮಾಜಕ್ಕಾಗಿ ಮಾಡಿದ ಸತ್ಕಾರ್ಯಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶ ಇಲ್ಲವೇ ಇಲ್ಲ.

Image

ಬಾಳಿಗೊಂದು ಚಿಂತನೆ (14) - ಸೋಲು - ಗೆಲುವು

ನಾವೆಲ್ಲರು *ಗೆಲುವು*ಸಿಕ್ಕಾಗ ಹಿಗ್ಗುತ್ತೇವೆ. ಸಂತೋಷ ಪಡುತ್ತೇವೆ. ಎಲ್ಲರೊಂದಿಗೆ ಹಂಚಿಕೊಳ್ಳುತ್ತೇವೆ. *ಸೋಲು* ಬಂದಾಗ ಕುಗ್ಗುತ್ತೇವೆ, ಮನಸ್ಸು ಮುದುಡುತ್ತದೆ. ಅಯ್ಯೋ, ನನಗೆ ಹೀಗಾಯಿತಲ್ಲ? ಎಂದು ಹಲುಬುತ್ತೇವೆ. ಆ *ಸೋಲನ್ನು* ಸಹ ನಾವು ನಮ್ಮ ಸಮವಯಸ್ಕರೊಂದಿಗೆ, ನಮ್ಮ ಕುಟುಂಬದ ಸದಸ್ಯರೊಂದಿಗೆ, ನಮ್ಮ ಆತ್ಮೀಯ ಸ್ನೇಹಿತರೊಂದಿಗೆ ಹೇಳಿಕೊಂಡು, ಮನಸ್ಸು ಹಗುರ ಮಾಡಿಕೊಳ್ಳೋಣ. ಅವರಿಂದ ಏನಾದರೂ ಉತ್ತಮ ಸಲಹೆಗಳು ಸಿಗಲೂಬಹುದು.

Image