ಸದ್ಭಾವನೆ: ಯಶಸ್ಸಿನ ಕೀಲಿಕೈ
(“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್.
ಕರ್ನಾಟಕ ಸರಕಾರದ ಕಾನೂನು ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ, ಮೈಸೂರಿನಲ್ಲಿ ನೆಲೆಸಿದ ದಿ. ಎ. ವೆಂಕಟ ರಾವ್ ಪ್ರಾಮಾಣಿಕ, ಸಜ್ಜನ, ಧೀಮಂತ ವ್ಯಕ್ತಿ. ಅವರು ಬಾಳಿನಲ್ಲಿ ನುಡಿದಂತೆ ನಡೆದವರು. ಈ ಅನುಭವಗಳನ್ನು ಮೊದಲು ಮೈಸೂರಿನ ಸಂಜೆ ಪತ್ರಿಕೆಯಲ್ಲಿ ಇಂಗ್ಲಿಷಿನಲ್ಲಿ ಅಂಕಣವಾಗಿ ಬರೆದರು. ಅವುಗಳ ಸಂಕಲನ ೨೦೦೬ರಲ್ಲಿ ಪ್ರಕಟವಾದ “ಮೆಮೊಯರ್ಸ್ ಆಫ್ ಎ ಜಡ್ಜ್”. ಅದರ ಕನ್ನಡಾನುವಾದವೇ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ೨೦೦೯ರಲ್ಲಿ ಪ್ರಕಟಿಸಿದ ಈ ಪುಸ್ತಕ.
- Read more about ಸದ್ಭಾವನೆ: ಯಶಸ್ಸಿನ ಕೀಲಿಕೈ
- Log in or register to post comments