ನಮ್ಮ ನುಡಿಯು

ದೇವನು ಕರುಣಿಸಿದನೆಮಗೆ ಮಾತಿನ ಭಾಗ್ಯವನ್ನು
ನುಡಿಯಲು ಮನುಜನು ಸೃಷ್ಠಿಸಿದ ಹಲವು ಭಾಷೆಯನ್ನು.
ಭಾಷೆಯು ಒಗ್ಗೂಡಿಸಿದೆ ವಿವಿಧ ಪ್ರಾಂತ್ಯಗಳನ್ನು
ಜನಮನಗಳ ಬಂಧಿಸಿತು ಈ ನುಡಿ - ಹೊನ್ನು.
ನುಡಿ ಕನ್ನಡವಾಗಿರಲು ಎಷ್ಟು ಚೆನ್ನು
ನುಡಿದು ಎಲ್ಲೆಡೆ ಫಸರಿಸು ಕಸ್ತೂರಿ ಸುಗಂಧವನ್ನು.

ತಾಯಿ ಲಾಲಿಹಾಡಿಗೆ ಧನಿಗೂಡಿಸುವ ಈ ನುಡಿಯು.
ತಂದೆಯ ಪ್ರೀತಿಯನು ತಿಳಿಹೇಳಿದ ಈ ನುಡಿಯು.
ಒಡಹುಟ್ಟಿದವರ ಬಾಂದವ್ಯವನು ಬೆಸೆದ ಈ ನುಡಿಯು.
ಅಜ್ಜನ ನೀತಿಕತೆಗಳಲಿ ಕಾಣುವ ಈ ನುಡಿಯು.
ಮಕ್ಕಳಲಿ ತೊದಲನು ನುಡಿಸಿದ ಈ ನುಡಿಯು.
ಗೆಳೆಯರೊಡನೆ ಆಟದಿ ಕಲೆತ ಈ ನುಡಿಯು.

ಯಾದ್ ವಶೇಮ್ (ನೂರು ಸಾವಿರ ಸಾವಿನ ನೆನಪು)

ಪುಸ್ತಕದ ಲೇಖಕ/ಕವಿಯ ಹೆಸರು
ನೇಮಿಚಂದ್ರ
ಪ್ರಕಾಶಕರು
ನವಕರ್ನಾಟಕ ಪ್ರಕಾಶನ, ಬೆಂಗಳೂರು
ಪುಸ್ತಕದ ಬೆಲೆ
ರೂ.೧೯೦

ನೇಮಿಚಂದ್ರ ಅವರ “ಯಾದ್ ವಶೇಮ್” ಕಾದಂಬರಿ ಓದಿದ ನಂತರ, ಓದುಗರ ನೆನಪಿನ ಸಾಗರದಲ್ಲಿ ಮತ್ತೆಮತ್ತೆ ಸುನಾಮಿಯಂತೆ ಎದ್ದೇಳುವ ಮಾತು: “ಜಗತ್ತು ನಿಂತು ನೋಡಿತ್ತು ಅರುವತ್ತು ಲಕ್ಷ ಯಹೂದಿಗಳ ಮಾರಣ ಹೋಮವನ್ನು, ನಿಂತು ನೋಡಿತ್ತು ….. ಪ್ರತಿಭಟಿಸದೆ.”
ಅದು, ಈ ಕಾದಂಬರಿಯ ಪ್ರಧಾನ ಪಾತ್ರ ಹ್ಯಾನಾ ಮೋಸೆಸ್ ಕಾದಂಬರಿಯ ಉದ್ದಕ್ಕೂ ಮತ್ತೆಮತ್ತೆ ನೆನೆಯುವ ಮಾತು. ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಮತ್ತು ಅವನ ಸೈನ್ಯದ ಹಿಡಿತದಿಂದ ಕೊನೆಯ ಕ್ಷಣದಲ್ಲಿ ಪಾರಾಗಿ, ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ ಡಾ. ಆರನ್ ಮೊಸೆಸ್ ಅವರ ಮಗಳು ಹ್ಯಾನಾ.

ಪೆರ್ಡೂರು ಕುಂಬಾರರ ಗುಡಿ ಕೈಗಾರಿಕೆ ಸಂಘದ ಪರಿಸರಸ್ನೇಹಿ ಯೋಜನೆ

ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕಿನ ನಿಷೇಧದಿಂದಾಗಿ, ಕುಂಬಾರಿಕೆಗೆ ದೊಡ್ಡ ಅವಕಾಶವೊಂದು ಒದಗಿ ಬಂದಿದೆ. ಆ ಪ್ಲಾಸ್ಟಿಕಿನಿಂದ ತಯಾರಿಸುವ ನಿತ್ಯ ಬಳಕೆಯ ವಸ್ತುಗಳನ್ನು ಮಣ್ಣಿನಿಂದ ತಯಾರಿಸಿದರೆ, ಪರಿಸರಸ್ನೇಹಿಯಾದ ಈ ವಸ್ತುಗಳಿಗೆ ಬೇಡಿಕೆ ಇದ್ದೇ ಇರುತ್ತದೆ.
ಈ ಅವಕಾಶ ಬಳಸಿಕೊಳ್ಳಲು ಮುಂದಾಗಿದೆ ಉಡುಪಿ ಹತ್ತಿರದ ಪೆರ್ಡೂರಿನ ಕುಂಬಾರರ ಗುಡಿ ಕೈಗಾರಿಕೆ ಸಂಘ. ಪ್ಲಾಸ್ಟಿಕ್ ಕಪ್‍ಗಳಿಗೆ ಬದಲಿಯಾಗಿ ಮಣ್ಣಿನ ಕಪ್ ತಯಾರಿಸುವುದು ಈ ಸಂಘದ ಸದ್ಯದ ಯೋಜನೆ. ಆದರೆ, ಪ್ಲಾಸ್ಟಿಕ್ ಅಥವಾ ಪೇಪರ್ ಕಪ್‍ನ ಬೆಲೆಯಲ್ಲಿ ಮಣ್ಣಿನ ಕಪ್ ತಯಾರಿಸುವುದು ಸವಾಲಿನ ಕೆಲಸ.

Image

ಮಂಗಳೂರಿನ ನೀರಿನ ಬಿಲ್‍ಗಳ "ಸುದ್ದಿ"

ಮಂಗಳೂರು ಮಹಾನಗರಪಾಲಿಕೆಯ ೨೦೦೯-೧೦ರ ಬಜೆಟನ್ನು ೨೮ ಜೂನ್ ೨೦೦೯ರಂದು ಮಂಡಿಸಲಾಯಿತು. ಇದರಲ್ಲಿ ಮಂಗಳೂರಿನ ನೀರು ಬಳಕೆದಾರರಿಗೆ ವಿಧಿಸುವ ನೀರಿನ ಶುಲ್ಕದಿಂದ ಸಂಗ್ರಹವಾಗುವ ಆದಾಯ ರೂಪಾಯಿ ೨೮.೫ ಕೋಟಿ ಎಂದು ಅಂದಾಜಿಸಲಾಗಿದೆ. (ಈ ಸಾಲಿನ ಪಾಲಿಕೆಯ ಒಟ್ಟು ಆದಾಯ ರೂ.೧೭೫.೩೮ ಕೋಟಿ ಮತ್ತು ಒಟ್ಟು ವೆಚ್ಚ ರೂ. ೧೭೩.೯೦ ಕೋಟಿ)

ನೀರಿನ ಶುಲ್ಕದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾ ಹೋದಂತೆ ಅದರ ವಿವಿಧ ಮುಖಗಳು ತೆರೆದುಕೊಳ್ಳುತ್ತವೆ. ಮಂಗಳೂರು ಮಹಾನಗರಪಾಲಿಕೆ ಪ್ರದೇಶದಲ್ಲಿ ಸುಮಾರು ೫೪,೦೦೦ ನೀರಿನ ಮೀಟರ್‍ಗಳನ್ನು ಅಳವಡಿಸಲಾಗಿದೆ. ಈ ಎಲ್ಲ ನೀರಿನ ಬಳಕೆದಾರರಿಗೆ ಜೂನ್ ೨೦೦೮ರ ವರೆಗೆ ಅರ್ಧ ವಾರ್ಷಿಕ (ಆರು ತಿಂಗಳಿಗೊಮ್ಮೆ) ನೀರಿನ ಬಿಲ್ ನೀಡಲಾಗುತ್ತಿತ್ತು.

Image

ವಾಹನ – ರೈಲುಗಳಿಂದಾಗುವ ಅಸಹಜ ಸಾವುಗಳ ಇಳಿಕೆಯ ತುರ್ತು

ಸಪ್ಟಂಬರ್ ೨೦೧೪ರಲ್ಲಿ ಕಾಶ್ಮೀರದಲ್ಲಿ ಭೀಕರ ನೆರೆಯಿಂದಾಗಿ ಹಲವರ ಸಾವು. ಅದರಿಂದಾದ ಹಾನಿ ಸಾವಿರಾರು ಕೋಟಿ ರೂಪಾಯಿಗಳೆಂದು ಅಂದಾಜು. ೨೦೧೩ರಲ್ಲಿ ಉತ್ತರಖಂಡದಲ್ಲಿ ಚರಿತ್ರೆಯಲ್ಲೇ ಕಂಡರಿಯದ ಹಠಾತ್ ನೆರೆಯಿಂದಾಗಿ ಸತ್ತವರು ಸುಮಾರು ೫,೦೦೦ ಜನರೆಂದು ಸರಕಾರದಿಂದಲೇ ಘೋಷಣೆ. ೨೦೧೦ರಲ್ಲಿ ಮೇಘಸ್ಫೋಟದಿಂದ ಲೆಹ್‍ನಲ್ಲಿ ಭಾರೀ ಹಾನಿ. ೨೦೧೮ರಲ್ಲಿ ಕೇರಳದಲ್ಲಿ ಶತಮಾನದ ಮಹಾನೆರೆಯಿಂದಾಗಿ ಅಪಾರ ಹಾನಿ. ೨೦೧೮ರ ಆಗಸ್ಟಿನಲ್ಲಿ ಮಹಾಮಳೆಯಿಂದಾಗಿ ಕೊಡಗಿನಲ್ಲಾದ ಅನಾಹುತ ಹಾಗೂ ಜೀವಹಾನಿ ನಮ್ಮ ನೆನಪಿನಿಂದ ಮಾಸಿಲ್ಲ.
ಇವಲ್ಲದೆ, ಹಲವು ಭೂಕಂಪ ಹಾಗೂ ಬಿರುಗಾಳಿಗಳಿಂದಾದ ಹಾನಿಯನ್ನು ನೆನೆದಾಗ ನಮಗನಿಸುತ್ತದೆ: ನಮ್ಮ ದೇಶದಲ್ಲಿ ಮತ್ತೆಮತ್ತೆ ಜರಗುತ್ತಿರುವ ಪ್ರಾಕೃತಿಕ ವಿಕೋಪಗಳಿಂದಾಗಿ ಅಪಾರ ಜೀವಹಾನಿ ಆಗುತ್ತಿದೆ ಎಂದು.

Image

ಬಯಲುಸೀಮೆಯಲ್ಲಿ ಅಡಿಕೆ ಕೃಷಿ ಜೂಜಿನಾಟವೇ?

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿಯ ರೈತ ರಾಜು ಸ್ವಾಮಿ ತನ್ನ ನಾಲ್ಕು ಹೆಕ್ಟೇರ್ ಅಡಿಕೆ ತೋಟದಲ್ಲಿ ೧೨ ಕೊಳವೆಬಾವಿ ಕೊರೆಸಿದ್ದಾರೆ. ಒಂದರಲ್ಲೂ ನೀರು ಸಿಕ್ಕಿಲ್ಲ!
ಈಗ, ತನ್ನ ಅಡಿಕೆ ಸಸಿಗಳನ್ನು ಉಳಿಸಲಿಕ್ಕಾಗಿ ಟ್ಯಾಂಕರಿನಲ್ಲಿ ನೀರು ತಂದು ಹಾಕುತ್ತಿದ್ದಾರೆ, ೧೭ ಕಿಮೀ ದೂರದ ಭದ್ರಾ ಕಾಲುವೆಯಿಂದ. ೨೪,೦೦೦ ಲೀಟರ್ ನೀರು ತರುವ ಟ್ಯಾಂಕರಿನ ಒಂದು ಟ್ರಿಪ್ಪಿಗೆ ಅವರು ಪಾವತಿಸುವ ಹಣ ರೂ.೨,೦೦೦. ಪ್ರತಿಯೊಂದು ಹೆಕ್ಟೇರ್ ಅಡಿಕೆ ತೋಟಕ್ಕೆ ವಾರಕ್ಕೆ ಹಾಕಬೇಕಾದ ನೀರು ಕನಿಷ್ಠ ಒಂದು ಲಕ್ಷ ಲೀಟರ್ ಎಂಬುದವರ ಲೆಕ್ಕಾಚಾರ. ೨೦೧೯ರ ಜನವರಿ ಮೂರನೇ ವಾರದಿಂದ ಮೇ ಮಧ್ಯದ ತನಕ ಟ್ಯಾಂಕರಿನಲ್ಲಿ ತೋಟಕ್ಕೆ ನೀರು ತರಿಸಲಿಕ್ಕಾಗಿ ಅವರು ಮಾಡಿರುವ ವೆಚ್ಚ ಬರೋಬ್ಬರಿ ೫.೫ ಲಕ್ಷ ರೂಪಾಯಿ!

Image

ನೀರುಳಿಸುವ ಪಾಠ ಮನೆಯಲ್ಲೇ ಶುರುವಾಗಲಿ

ಹೈದರಾಬಾದಿಗೆ ಹೋಗಿದ್ದಾಗ, ಮಹಾನಗರದ ಕೇಂದ್ರ ಭಾಗದಲ್ಲಿದ್ದ ಹೋಟೆಲಿನಲ್ಲಿ ತಂಗಿದ್ದೆ. ಅಲ್ಲಿಯ ಬಾತ್‍ರೂಂನ ಬೇಸಿನ್‍ನ ಮೇಲ್ಗಡೆ ಗೋಡೆಯಲ್ಲಿ ದೊಡ್ಡ ಕನ್ನಡಿ. ಅದರ ಪಕ್ಕದಲ್ಲಿ ಕಣ್ಣಿಗೆ ರಾಚುವಂತೆ ಒಂದು ಭಿತ್ತಿಪತ್ರ.

Image

ಪರಿಸರಸ್ನೇಹಿ ಮಣ್ಣಿನ ಟೀ ಕಪ್ ಕಥನ

ಇತ್ತೀಚೆಗೆ ಬದರಿನಾಥಕ್ಕೆ ಹೋಗಿದ್ದಾಗ, ಅಲ್ಲಿ ಬಾದಾಮಿ ಹಾಲನ್ನು ನಮಗೆ ಕುಡಿಯಲು ಕೊಟ್ಟದ್ದು ಮಣ್ಣಿನ ಲೋಟದಲ್ಲಿ. ಆಗ ನೆನಪಾಯಿತು ಕೊಲ್ಕತಾದ ಮಣ್ಣಿನ ಟೀ ಕಪ್. ಅಲ್ಲಿ ಈಗಲೂ ಟೀ ಷಾಪ್‍ಗಳಲ್ಲಿ ಮಣ್ಣಿನ ಕಪ್‍ಗಳಲ್ಲಿ ಟೀ ಲಭ್ಯ.
ಅದೊಂದು ಕಾಲವಿತ್ತು, ಉತ್ತರ ಭಾರತದಲ್ಲೆಲ್ಲ ಮಣ್ಣಿನ ಕಪ್‍ನಲ್ಲೇ ಟೀ ಕುಡಿಯುತ್ತಿದ್ದ ಕಾಲ. ಆದರೆ ಕಾಲ ಸರಿದಂತೆ ಆ ಅಭ್ಯಾಸ ನಿಂತೇ ಹೋಯಿತು. ಮಣ್ಣಿನ ಕಪ್‍ಗಳ ಸ್ಥಾನವನ್ನು ಬಳಸಿ-ಎಸೆಯುವ ಪ್ಲಾಸ್ಟಿಕ್ ಮತ್ತು ಕಾಗದದ ಕಪ್‍ಗಳು ಆಕ್ರಮಿಸಿಕೊಂಡವು.

Image

ಚಂಚಲ ಮನಸ್ಸು

ಎರಡು ಗುರುಕುಲಗಳಿದ್ದವು: ಪೂರ್ವ ಮತ್ತು ಪಶ್ಚಿಮ. ಅಲ್ಲಿನ ಶಿಷ್ಯರೊಳಗೆ ಯಾವಾಗಲೂ ಪೈಪೋಟಿ. ಅದೊಂದು ದಿನ, ಮಾರುಕಟ್ಟೆಗೆ ಹೋಗುವ ಹಾದಿಯಲ್ಲಿ ಪೂರ್ವ ಗುರುಕುಲದ ಒಬ್ಬ ಶಿಷ್ಯ ಮತ್ತು ಪಶ್ಚಿಮ ಗುರುಕುಲದ ಇನ್ನೊಬ್ಬ ಶಿಷ್ಯನ ಮುಖಾಮುಖಿ.

Image